ಜೆಡಿಎಸ್ ಪಕ್ಷ ಮತ್ತೊಮ್ಮೆ ಅಧಿಕಾರಕ್ಕೆ ಬರುವುದು ಸತ್ಯ

1
53

ರಾಜ್ಯದಲ್ಲಿ ಜೆಡಿಎಸ್ ಪಕ್ಷ ಮತ್ತೊಮ್ಮೆ ಅಧಿಕಾರಕ್ಕೆ ಬರುವುದು ಸತ್ಯ ಎಂದು ಪಕ್ಷದ ವರಿಷ್ಠರಾದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಹೇಳಿದ್ದಾರೆ. ಬೆಂಗಳೂರಿನ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ನಡೆದ ಜೆಡಿಎಸ್ ಜನತಾ ಮಿತ್ರ ಸಮಾವೇಶದಲ್ಲಿ ಮಾತನಾಡಿದ ಅವರು, ಹೆಚ್.ಡಿ. ದೇವೇಗೌಡರು, ಕುಮಾರಸ್ವಾಮಿ ಮತ್ತೆ ಮುಖ್ಯಮಂತ್ರಿಯಾಗಲಿದ್ದಾರೆ. ಕುಮಾರಸ್ವಾಮಿ ಮುಖ್ಯಮಂತ್ರಿ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಜೆಡಿಎಸ್ ಪಕ್ಷವನ್ನು ಉಳಿಸಲು ಕುಮಾರಸ್ವಾಮಿ ಏನೇನು ಮಾಡಿದ್ದಾರೆ ಎಂದು ಗೊತ್ತಿದೆ. ನನ್ನ ಆರೋಗ್ಯ ಮತ್ತಷ್ಟು ಸುಧಾರಣೆಯಾಗುವ ವಿಶ್ವಾಸ ಇದೆ. ನಾನು ಮುಂದಿನ ದಿನಗಳಲ್ಲಿ ಅನೇಕ ಕೇಂದ್ರಗಳಿಗೆ ಭೇಟಿ ನೀಡುತ್ತೇನೆ. ನನಗೆ ಇನ್ನೂ ಹೋರಾಟ ಮಾಡುವ ಶಕ್ತಿ ಇದೆ. ಹಿಂದಿನ ವಿಚಾರಗಳನ್ನು ಮಾತನಾಡಲು ಇಷ್ಟಪಡುವುದಿಲ್ಲ. ಈ ಪಕ್ಷವನ್ನು ಉಳಿಸಿ ಬೆಳೆಸಿ ಎಂದು ಕೈ ಮುಗಿದು ಮನವಿ ಮಾಡುತ್ತೇನೆ ಎಂದು ದೇವೇಗೌಡರು ಹೇಳಿದ್ದಾರೆ.

1 COMMENT

LEAVE A REPLY

Please enter your comment!
Please enter your name here