ಎಚ್‍ಡಿಕೆ ರಾಜ್ಯ ಪ್ರವಾಸ

Date:

ವಿಧಾನಸಭಾ ಚುನಾವಣೆ ಸಮೀಪಿಸ್ತಿದ್ದಂತೆ ಎಲ್ಲಾ ರಾಜಕೀಯ ಪಕ್ಷಗಳು ತಮ್ಮ ಸಂಘಟನೆಯನ್ನು ಬಲಪಡಿಸಲು ಕಾರ್ಯಪ್ರವೃತ್ತವಾಗಿದ್ದು, ಜೆಡಿಎಸ್ ನವೆಂಬರ್‍ನಿಂದ ಸಂಘಟನಾ ರ್ಯಾಲಿ ಆರಂಭಿಸಲಿದೆ.


ಹೃದಯ ಶಸ್ತ್ರಚಿಕಿತ್ಸೆ ಒಳಗಾಗಿರೋ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರ ಸ್ವಾಮಿ ವಿಶ್ರಾಂತಿ ಬಳಿಕ ಇದೀಗ ಮತ್ತೆ ಅಖಾಡಕ್ಕೆ ಇಳಿಯಲು ತಯಾರಾಗಿದ್ದಾರೆ. ನವೆಂಬರ್ 3ರಂದು ಚಾಮುಂಡಿ ಬೆಟ್ಟದಲ್ಲಿ ಜೆಡಿಎಸ್ ಸಂಘಟನಾ ರ್ಯಾಲಿಗೆ ಚಾಲನೆ ದೊರೆಯಲಿದೆ.
ಉತ್ತರ ಕರ್ನಾಟಕದ 62 ವಿಧಾನಸಭಾ ಕ್ಷೇತ್ರವ್ಯಾಪ್ತಿಯಲ್ಲಿ ಕುಮಾರಸ್ವಾಮಿ ಮೊದಲ ಹಂತದ ಪ್ರವಾಸ ಮಾಡಲಿದ್ದಾರೆ. ಇತ್ತೀಚೆಗಷ್ಟೇ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿರೋ ಅವರು ತಮ್ಮ ಆರೋಗ್ಯದ ಕಡೆಗೂ ಹೆಚ್ಚು ಗಮನ ನೀಡಬೇಕಾಗದ ಅಗತ್ಯವಿದೆ. ಮನೆಯವರ ಒತ್ತಾಯಕ್ಕೆ ಮಣಿದು ಪ್ರವಾಸದ ವೇಳೆಯಲ್ಲಿ ಆರೋಗ್ಯಕ್ಕೆ ಯಾವುದೇ ತೊಂದರೆ ಆಗಬಾರದೆಂಬ ದೃಷ್ಠಿಯಿಂದ ಮುಂಜಾಗೃತಕ್ರಮವಾಗಿ ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ.


ಪ್ರವಾಸದ ವೇಳೆಯಲ್ಲಿ ಎಚ್.ಡಿ ಕುಮಾರ ಸ್ವಾಮಿ ಅವರು ಮಾಂಸಹಾರದಿಂದ ದೂರ ಉಳಿಯಲಿದ್ದಾರೆ. ಪ್ರವಾಸಕ್ಕಾಗಿ ಸುಮಾರು 1 ಕೋಟಿ ರೂ ವೆಚ್ಚದಲ್ಲಿ ವಿಶೇಷ ಬಸ್ ತಯಾರಿಸಲಾಗಿದ್ದು ಕುಮಾರ ಸ್ವಾಮಿ ಅವರ ಜೊತೆ ಪ್ರವಾಸದಲ್ಲಿರೋ ಬಾಣಸಿಗ ಬಸ್‍ನಲ್ಲಿಯೇ ಅಡುಗೆ ತಯಾರು ಮಾಡಿಕೊಡುತ್ತಾರೆ. ಜೊತೆಗೆ ನಿತ್ಯ ಯೋಗ ಮಾಡುವ ಸಲುವಾಗಿ ಯೋಗಗುರು ಇರುತ್ತಾರೆ. ಆರೋಗ್ಯ ವಿಚಾರಿಸಲು ಪುರುಷ ನರ್ಸ್ ಕೂಡ ಜೊತೆಗಿರುತ್ತಾರೆ.

Share post:

Subscribe

spot_imgspot_img

Popular

More like this
Related

ಸಿದ್ದರಾಮಯ್ಯ ಸರ್ಕಾರ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ: ಬಿ.ವೈ. ವಿಜಯೇಂದ್ರ

ಸಿದ್ದರಾಮಯ್ಯ ಸರ್ಕಾರ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ: ಬಿ.ವೈ. ವಿಜಯೇಂದ್ರ ಬೆಂಗಳೂರು: ಮುಖ್ಯಮಂತ್ರಿ...

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ ಬೇಡ – ಡಿ.ಕೆ. ಶಿವಕುಮಾರ್

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ...

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ ಗಂಭೀರ

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ...

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...