ಲಂಚವಿಲ್ಲದೆ ಯಾವುದೇ ಕಡತ ಮುಂದಕ್ಕೆ ಚಲಿಸುವುದಿಲ್ಲ

Date:

ಸರಕಾರಿ ಕಚೇರಿಗಲ್ಲಿ ಲಂಚವಿಲ್ಲದೆ ಯಾವುದೇ ಕಡತ ಮುಂದಕ್ಕೆ ಚಲಿಸುವುದಿಲ್ಲ’ ಎಂದು ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಸಹಾಯಕ ಎಂಜಿನಿಯರ್‌ ಬಿ.ಟಿ.ರಾಜು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ನಟರಾಜನ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ, ಜಾಮೀನು ನೀಡಲು ನಿರಾಕರಿಸಿದೆ. ರಾಜು ಅವರು ದೂರುದಾರರ ಪರವಾಗಿ ಆದೇಶ ನೀಡಲು 1 ಕೋಟಿ ರೂ.ಗೆ ಬೇಡಿಕೆಯಿಟ್ಟಿದ್ದರು. ಬಳಿಕ ಚೌಕಾಸಿ ಮಾಡಿ ಕಾಮಗಾರಿ ಪೂರ್ಣಗೊಳಿಸಲು 60 ಲಕ್ಷ ರೂ. ಗೆ ಒಪ್ಪಿಕೊಂಡಿದ್ದರು. 2022ರ ಜೂನ್‌ 7ರಂದು ಲಂಚದ ಮೊತ್ತದಲ್ಲಿ ಮುಂಗಡವಾಗಿ 5 ಲಕ್ಷ ರೂಪಾಯಿ ಸ್ವೀಕರಿಸುವಾಗ ಎಸಿಬಿ ಬಲೆಗೆ ಬಿದ್ದಿದ್ದಾರೆ.

Share post:

Subscribe

spot_imgspot_img

Popular

More like this
Related

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ ನವದೆಹಲಿ:...

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ ಬೆಂಗಳೂರು:...

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ!

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ! ಗರ್ಭಾವಸ್ಥೆಯಲ್ಲಿ ಮಹಿಳೆ ಅನುಭವಿಸುವ...

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ ನವದೆಹಲಿ:...