ಬಂದ್ ಯಶಸ್ವಿಯಾದ ಬೆನ್ನಲ್ಲೇ ಹೋರಾಟ ಮತ್ತಷ್ಟು ತೀವ್ರ

Date:

ಬೆಂಗಳೂರು : ಬಂದ್ ಯಶಸ್ವಿಯಾದ ಬೆನ್ನಲ್ಲೇ ಹೋರಾಟ ಮತ್ತಷ್ಟು ತೀವ್ರಗೊಳಿಸಲು ಚಾಮರಾಜಪೇಟೆ ನಾಗರಿಕರ ಒಕ್ಕೂಟ ಮುಂದಾಗಿದೆ. ಈದ್ಗಾ ಮೈದಾನ ಬಿಬಿಎಂಪಿ ಸ್ವತ್ತೆಂದು ಘೋಷಣೆ ಆಗುವ ತನಕ ಜಗ್ಗುವುದಿಲ್ಲ ಎಂದಿರುವ ಒಕ್ಕೂಟಗಳು ಸರ್ಕಾರದ ಮೇಲೆ ಹೇಗೆ ಒತ್ತಡ ಹೇರಬೇಕು ಎಂಬುದರ ಬಗ್ಗೆ ಇಂದು ಸಂಜೆ ಚಾಮರಾಜಪೇಟೆಯಲ್ಲಿ ಸಭೆ ಆಯೋಜಿಸಿದೆ.

2-3 ದಿನದೊಳಗೆ ನೂರಾರು ಬೈಕ್ ಗಳ ಮೂಲಕ ರ್‍ಯಾಲಿ ಮಾಡುವ ಮೂಲಕ ಬಿಬಿಎಂಪಿ ಹಾಗೂ ನಗರಾಭಿವೃದ್ಧಿ ಇಲಾಖೆ ಮುತ್ತಿಗೆ ಹಾಕಲು ಚಿಂತನೆ ನಡೆದಿದೆ. ಮತ್ತೊಂದೆಡೆ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಸಂಸದ ಪಿ.ಸಿ ಮೋಹನ್ ಮೇಲೆ ಒತ್ತಡ ಹಾಕಿ ಸಿಎಂ ಬೊಮ್ಮಾಯಿ ಮತ್ತು ಗೃಹ ಸಚಿವ ಅರಗ ಜ್ಞಾನೇಂದ್ರ ಭೇಟಿಗೆ ಅವಕಾಶ ಕೊಡಿಸುವಂತೆ ಒಕ್ಕೂಟ ಪಟ್ಟು ಹಿಡಿದಿದೆ.

ಹಲವು ವಿಷಯಗಳ ಕುರಿತು ಇಂದಿನ ಸಭೆಯಲ್ಲಿ ಚರ್ಚೆ ನಡೆಯಲಿದ್ದು ಎಲ್ಲ ಸದಸ್ಯರ ಅಭಿಪ್ರಾಯ ಪಡೆದು ಮುಂದಿನ ಹೋರಾಟದ ರೂಪುರೇಷೆಯ ಬಗ್ಗೆ ಚಾಮರಾಜಪೇಟೆ ನಾಗರಿಕರ ಒಕ್ಕೂಟ ತೀರ್ಮಾನ ತೆಗೆದುಕೊಳ್ಳಲಿದೆ.

Share post:

Subscribe

spot_imgspot_img

Popular

More like this
Related

ನಿಮ್ಮದು ಲೂಟಿ ಮಾಡುವ ಚಪಲ, ನನ್ನದು ಜನರ ಜೊತೆ ನಿಲ್ಲುವ ಚಪಲ: ಹೆಚ್.ಡಿ.ಕುಮಾರಸ್ವಾಮಿ ಟಾಂಗ್

ನಿಮ್ಮದು ಲೂಟಿ ಮಾಡುವ ಚಪಲ, ನನ್ನದು ಜನರ ಜೊತೆ ನಿಲ್ಲುವ ಚಪಲ:...

ಒಕ್ಕೂಟ ವ್ಯವಸ್ಥೆ ಹಾಳು ಮಾಡುವ ಕುತಂತ್ರ ನಡೆಸಿದ ಸಿಎಂ: ಬಿ.ವೈ.ವಿಜಯೇಂದ್ರ ವಾಗ್ದಾಳಿ

ಒಕ್ಕೂಟ ವ್ಯವಸ್ಥೆ ಹಾಳು ಮಾಡುವ ಕುತಂತ್ರ ನಡೆಸಿದ ಸಿಎಂ: ಬಿ.ವೈ.ವಿಜಯೇಂದ್ರ ವಾಗ್ದಾಳಿ ಬೆಳಗಾವಿ:...

ಮತ್ತೊಮ್ಮೆ ಹದಗೆಟ್ಟ ಬೆಂಗಳೂರಿನ ಗಾಳಿ: ಏರ್ ಕ್ವಾಲಿಟಿ ಇನ್ನೂ ಅನಾರೋಗ್ಯಕರ ಹಂತದಲ್ಲೇ

ಮತ್ತೊಮ್ಮೆ ಹದಗೆಟ್ಟ ಬೆಂಗಳೂರಿನ ಗಾಳಿ: ಏರ್ ಕ್ವಾಲಿಟಿ ಇನ್ನೂ ಅನಾರೋಗ್ಯಕರ ಹಂತದಲ್ಲೇ ಬೆಂಗಳೂರು:...

ಪತಿ-ಪತ್ನಿ ಕಲಹ: ನಾಲ್ಕು ವರ್ಷದ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆ

ಪತಿ-ಪತ್ನಿ ಕಲಹ: ನಾಲ್ಕು ವರ್ಷದ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆ ಬೆಂಗಳೂರು:...