No menu items!
12.1 C
Munich
Saturday, May 2, 2026

ಇಳಯರಾಜ ರಾಷ್ಟ್ರ ಪ್ರಶಸ್ತಿ ತಿರಸ್ಕರಿಸಿದ್ದೇಕೆ ..?

Must read

ಸಾವಿರ ಚಿತ್ರಗಳ ಸರದಾರ ಇಳಯರಾಜ ರಾಷ್ಟ್ರ ಪ್ರಶಸ್ತಿಯನ್ನು ತಿರಸ್ಕರಿಸಿ ಅಚ್ಚರಿ ಮೂಡಿಸಿದ್ದಾರೆ. ಇವರ 1000 ನೇ ಚಿತ್ರ ತಾರೈತಪ್ಪಟೈ ಚಿತ್ರಕ್ಕಾಗಿ ಉತ್ತಮ ಹಿನ್ನೆಲೆ ಸಂಗೀತ ನಿರ್ದೇಶಕ ರಾಷ್ಟ್ರ ಪ್ರಶಸ್ತಿಯನ್ನು ಸ್ವೀಕರಿಸಬೇಕಿತ್ತು. ಆದರೆ ಇಳಯರಾಜ ಈ ಪ್ರಶಸ್ತಿಯನ್ನು ತಿರಸ್ಕರಿಸಿ ಅಸಮಾಧಾನ ಹೊರಹಾಕಿದ್ದಾರೆ.

ಹೌದು ಇಳಯರಾಜ ತಮಗೆ ಒಲಿದು ಬಂದ ರಾಷ್ಟ್ರ ಪ್ರಶಸ್ತಿಯನ್ನು ತಿರಸ್ಕರಿಸಿದ್ದರ ಹಿಂದಿರೋ ಕಾರಣ ಸಂಗೀತ ವಿಬಾಗವನ್ನ ವಿಭಜನೆ ಮಾಡಿರೋ ವಿಚಾರವಾಗಿ ಅವರಿಗಿರೋ ಅಸಮಾಧಾನ.

ಗುರುವಾರ ತಮಿಳುನಾಡಿನ ತಿರುವಣ್ಣಾಮಲೈ ಬಳಿಯ ರಮಣ ಮಹರ್ಷಿ ಆಶ್ರಮಕ್ಕೆ ಭೇಟಿ ನೀಡಿ ಸಂಧರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಇಳಯರಾಜ ಪ್ರಶಸ್ತಿಯನ್ನು ತಿರಸ್ಕರಿಸಿದ್ದಕ್ಕೆ ಕಾರಣಗಳನ್ನು ವಿವರಿಸಿದ್ದಾರೆ.

ತಮ್ಮ ಸಂಗೀತಕ್ಕೆ ಸಂಪೂರ್ಣ ಮನ್ನಣೆ ಸಿಕ್ಕಿಲ್ಲ ಎಂದಿರುವ ಅವರು ಸಂಗೀತಕ್ಕೆ ನೀಡುವ ಪ್ರಶಸ್ತಿಯನ್ನು ಎರಡು ಭಾಗವಾಗಿ ವಿಭಜಿಸುವುದು ಸರಿಯಲ್ಲ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಈ ಹಿಂದೆ ತೆಲುಗಿನ ಸಾಗರಸಂಗಮಂ, ರುದ್ರವೀಣ, ಸಿಂಧುಬೈರವಿ ಚಿತ್ರಗಳಿಗೆ ತಾವು ಉತ್ತಮ ಸಂಗೀತ ನಿರ್ದೇಶಕ ಪ್ರಶಸ್ತಿ ಪಡೆದಿದ್ದೇನೆ. ಹೀಗಿರುವಾಗ ಈಗ ಪ್ರಶಸ್ತಿಯನ್ನು ಉತ್ತಮ ಸಂಗೀತ ನಿರ್ದೇಶಕ, ಉತ್ತಮ ಹಿನ್ನೆಲೆ ಸಂಗೀತ ನಿರ್ದೇಶಕ ಎಂದು ವಿಭಜಿಸಿರೋದು ಸರಿಯಲ್ಲ ಎಂದರು.

  • ಶ್ರೀ

POPULAR  STORIES :

ಶಿವಣ್ಣನ ಸ್ಯಾಂಡಲ್ ವುಡ್ ಪ್ರೀತಿ…. ಶಿವಣ್ಣ ನಿಮಗೆ ನೀವೇ ಸಾಟಿ

ಐಪಿಎಲ್ ಮ್ಯಾಚ್ನಿಂದ ಕೊಹ್ಲಿ ಸಸ್ಪೆಂಡ್..!!? ಕೊಹ್ಲಿ ನಸೀಬು ಹೀಗ್ಯಾಕೆ ಆಯ್ತು..!!?

`ಕಾಡಿಗೆ ಬೆಂಕಿ’ 50000 ಜನರು ಸುಟ್ಟು ಕರಕಲಾದರು..!?

ಪ್ರಿಯಾಂಕ ಲಡ್ಡು, ರಾಹುಲ್ ಫುಡ್ಡು, ಶೀಲಾ ಉಪ್ಪಿನಕಾಯಿ..! ಉತ್ತರ ಪ್ರದೇಶದಲ್ಲಿ ಪ್ರಶಾಂತ್ `ಕೈ’ ಚಳಕ..!?

ಕ್ರಿಸ್ ಗೇಲ್ ಗೆ ಡೇಟಿಂಗ್ ಆಫರ್ ಕೊಟ್ಟವಳ ಕಂಡಿಷನ್ ಏನ್ ಗೊತ್ತಾ..?

ದಿಲ್ಶಾನ್ ಹೆಂಡ್ತೀನಾ ಉಪುಲ್ ತರಂಗ ಮದ್ವೆಯಾದ..!? ದಿನೇಶ್ ಹೆಂಡ್ತೀನಾ ಮುರಳಿ ವಿಜಯ್ ವರಿಸಿದ..!!

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article