ಕಾಂಗರೂಗಳ ವಿರುದ್ಧ ಮತ್ತೆ ಮುಗ್ಗರಿಸಿದ ಟೀಂ ಇಂಡಿಯಾ

Date:

ಸತತ ಮೂರು ಪಂದ್ಯಗಳನ್ನು ಸೋತು ಮುಖಭಂಗ ಅನುಭವಿಸಿದ್ದ ಟೀಮ್ ಇಂಡಿಯಾ ಇಂದು ಮತ್ತೇ ಕಾಂಗರೂಗಳ ವಿರುದ್ಧ ನಡೆದ ನಾಲ್ಕನೇ ಪಂದ್ಯದಲ್ಲೂ ಸೋಲನುಭವಿಸಿದೆ. ಆರಂಭಿಕ ಶಿಖರ್ ಧವನ್ ಮತ್ತು ವಿರಾಟ್ ಕೊಹ್ಲಿಯವರ ದಾಖಲೆಯ ಜೊತೆಯಾಟದ ಮಧ್ಯೆಯೂ ಮಧ್ಯಮ ಕ್ರಮಾಂಕದ ವೈಫಲ್ಯದಿಂದಾಗಿ ಟೀಮ್ ಇಂಡಿಯಾ ಸೋಲನುಭವಿಸಿತು. ಆ ಮೂಲಕ ಆಸ್ಟ್ರೇಲಿಯಾ ತಂಡ ಸರಣಿಯಲ್ಲಿ 4-0ಯ ಅಂತರವನ್ನು ಪಡೆಯಿತು.
ಇದಕ್ಕೂ ಮುನ್ನ ಮನುಕಾ ಓವಲ್ ಮೈದಾನದಲ್ಲಿ ಟಾಸ್ ಗೆದ್ದ ಆಸೀಸ್ ನಾಯಕ ಸ್ಟೀವ್ ಸ್ಮಿತ್ ಅವರು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ನಾಯಕನ ನಿರ್ಧಾರವನ್ನು ಸಮರ್ಥಿಸುವಂತೆ ಆಡಿದ ಆರಂಭಿಕ ಆ್ಯರೋನ್ ಫಿಂಚ್ ಶತಕದಾಟವಾಡಿದರು. ಅವರಿಗೆ ಭರ್ಜರಿ ಸಾಥ್ ನೀಡಿದ ಡೇವಿಡ್ ವಾರ್ನರ್ 93 ರನ್ ಗಳಿಸಿ ಶತಕವಂಚಿತರಾದರು. ಇನ್ನು ಅಂತಿಮ ಓವರ್ ಗಳಲ್ಲಿ ಸಿಡಿದ ಮ್ಯಾಕ್ಸ್ ವೆಲ್ ಮತ್ತು ಸ್ಟೀವನ್ ಸ್ಮಿತ್ ತಂಡದ ಮೊತ್ತವನ್ನು 348ಕ್ಕೆ ಕೊಂಡೊಯ್ದರು. ಇನ್ನು ಭಾರತ ಪರ ಇಶಾಂತ್ ಶರ್ಮ 77ಕ್ಕೆ4, ಉಮೇಶ್ ಯಾದವ್ 67ಕ್ಕೆ3 ವಿಕೆಟ್ ಗಳಿಸಿದರು

Share post:

Subscribe

spot_imgspot_img

Popular

More like this
Related

ಸಿದ್ದರಾಮಯ್ಯ ಸರ್ಕಾರ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ: ಬಿ.ವೈ. ವಿಜಯೇಂದ್ರ

ಸಿದ್ದರಾಮಯ್ಯ ಸರ್ಕಾರ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ: ಬಿ.ವೈ. ವಿಜಯೇಂದ್ರ ಬೆಂಗಳೂರು: ಮುಖ್ಯಮಂತ್ರಿ...

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ ಬೇಡ – ಡಿ.ಕೆ. ಶಿವಕುಮಾರ್

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ...

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ ಗಂಭೀರ

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ...

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...