ಉರಿ ದಾಳಿ ಪ್ರತೀಕವಾಗಿ ಭಾರತೀಯ ಸೈನಿಕರು ಪಾಕ್ ಗಡಿ ಪ್ರವೇಶಿಸಿ ಉಗ್ರರ ದಮನಕ್ಕೆ ಸಿದ್ದವಾಗಿದ್ದು, ಪಾಕ್ ಗಡಿಯಲ್ಲಿ ಅಡಗಿದ್ದ ಉಗ್ರರನ್ನು ಸದೆ ಬಡಿಯುವಲ್ಲಿ ಭಾರತೀಯ ಸೇನೆ ಸಫಲವಾಗಿದೆ. ಇನ್ನು ಉಗ್ರರನ್ನು ರಕ್ಷಣೆಗೆ ಮುಂದಾಗಿರುವ ಪಾಕಿಸ್ಥಾನ ಸೈನಿಕರಿಗೂ ಕೂಡ ತಕ್ಕ ಶಾಸ್ತಿ ನೀಡಿರುವ ನಮ್ಮ ಸೈನಿಕರು ದಾಳಿಯ ವೇಳೆ ಒಂಬತ್ತು ಪಾಕ್ ಸೈನಿಕರನ್ನು ಹತ್ಯೆ ಮಾಡಿದ್ದಾರೆ. ಮಧ್ಯರಾತ್ರಿಯಿಂದ ಆರಂಭವಾದ ಈ ಕಾಳಗದಲ್ಲಿ ಒಂಭತ್ತು ಪಾಕ್ ಸೈನಿಕರು ಸೇರಿ 40 ಉಗ್ರರು ಉಡೀಸ್…..
ಕಾರ್ಯಾಚರಣೆಯಲ್ಲಿ ಉಗ್ರರ ನೆಲೆಗಳಿಗೆ ಏಕಾ ಏಕಿ ದಾಳಿ ಮಾಡಿದ ಭಾರತೀಯ ಸೇನೆ ಉಗ್ರ ನೆಲೆಯನ್ನು ಸಂಪೂರ್ಣವಾಗಿ ಧ್ವಂಸ ಮಾಡಿದ್ದಾರೆ. ರಾತ್ರಿಯಿಂದ ಬೆಳಗಿನ ಜಾವದವರೆಗೆ ಸೈನಿಕರು ನಡೆಸಿದ ದಾಳಿಯಲ್ಲಿ ಸುಮಾರು 3 ಕಿ.ಮೀ ವ್ಯಾಪ್ತಿಯವರೆಗೂ ಹರಡಿದ್ದ ಉಗ್ರರ ತಾಣವನ್ನು ಧ್ವಂಸ ಮಾಡಿದ್ದಾರೆ. ಈ ಮೂಲಕ ನಮ್ಮ ಸೇನೆ ಪ್ರಾಬಲ್ಯವನ್ನು ಎತ್ತಿ ತೋರಿಸಿದೆ.
ಇನ್ನು ಭಾರತ ಪಾಕ್ ನಡುವೆ ಯುದ್ದ ಸಂಭವಿಸುವ ಸಾಧ್ಯತೆ ಇರೋ ಮುನ್ಸೂಚನೆಯಿಂದಾಗಿ ಭಾರತದ ಗಡಿ ಭಾಗಗಳಲ್ಲಿ ವಾಸವಿರುವ ನಾಗರೀಕರನ್ನು ಸುರಕ್ಷಿತ ಸ್ಥಳಗಳಿಗೆ ವರ್ಗಾಯಿಸುವಂತೆ ಕೇಂದ್ರ ಗೃಹ ಸಚಿವ ರಾಜ್ನಾಥ್ ಸಿಂಗ್ ಮನವಿ ಮಾಡಿದ್ದಾರೆ. ಇನ್ನು ಸೇನಾ ಕಾರ್ಯಾಚರಣೆ ಕುರಿತಂತೆ ಇಂದು ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಸರ್ವ ಪಕ್ಷ ಸಭೆ ಕರೆದಿದ್ದು ಈ ಕುರಿತು ಚರ್ಚೆ ಆರಂಭಿಸಿದ್ದಾರೆ.
Like us on Facebook The New India Times
POPULAR STORIES :
ವಿದ್ಯಾರ್ಥಿಯ ಮೇಲೆ ಲೇಡಿ ಕಂಡಕ್ಟರ್ನ ಗೂಂಡಾಗಿರಿ..! Lady Conductor Fight
ಕೇಳ್ಬೇಡ ಕಣೇ ಸುಮ್ಕಿರೆ…! Cauvery Issue Comedy Song
ಎಚ್ಚರಿಕೆ.. ದೇಶದ ಪ್ರಮುಖ ನಗರಗಳಲ್ಲಿ ಪಾಕ್ ಉಗ್ರರು ದಾಳಿ ನಡೆಸುವ ಸಾಧ್ಯತೆ..!
ಅರ್ಜುನ್ ತೆಂಡೂಲ್ಕರ್ ರಮೇಶನಾದ್ರೆ..!! ಸುರೇಶ್ ಯಾರು ಗೊತ್ತಾ..?
ಜಿಯೋ ಕಾಲ್ಡ್ರಾಪ್ ಸಮಸ್ಯೆ: ಏರ್ಟೆಲ್, ಐಡಿಯಾ, ವೊಡಾಫೋನ್ಗೆ 9900ಕೋಟಿ ದಂಡ..?