ಕರ್ನಾಟಕ ಪೊಲೀಸ್ ಇಲಾಖೆಯ ಕೆಲವೇ ಕೆಲವು ಖಡಕ್ಕು ಅಧಿಕಾರಿಗಳಲ್ಲಿ ಒಬ್ಬರಾಗಿದ್ದ, ಕಳೆದ ವರ್ಷ ನಿವೃತ್ತರಾಗಿದ್ದ ಐಪಿಎಸ್ ಅಧಿಕಾರಿ ಬಿಪಿನ್ ಗೋಪಾಲಕೃಷ್ಣ ವಿಧಿವಶರಾಗಿದ್ದಾರೆ. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಗುರುವಾರ ಮುಂಜಾನೆ ಮಲ್ಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಬಿಪಿನ್ ಗೋಪಾಲಕೃಷ್ಣ ಮೂಲತಃ ಆಂಧ್ರಪ್ರದೇಶದ ನೆಲ್ಲೂರಿನವರು. 1982ರಲ್ಲಿ ಐಪಿಎಸ್ ಪರೀಕ್ಷೆ ಪಾಸು ಮಾಡಿ ಕರ್ನಾಟಕದಲ್ಲಿ ಸೇವೆ ಆರಂಭಿಸಿದ್ದರು. ಉಡುಪಿ, ಚಿಕ್ಕಮಗಳೂರು, ಕಲಬುರಗಿ, ಮೈಸೂರು ಜಿಲ್ಲೆಗಳಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ಮೈಸೂರು ನಗರದ ಪೊಲೀಸ್ ಆಯುಕ್ತರಾಗಿ, ಬೆಂಗಳೂರು ನಗರದ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿ, ಸಿಐಡಿ ಡಿಜಿಪಿಯಾಗಿ ಕಾರ್ಯ ನಿರ್ವಹಿಸಿದ್ದರು. ರಾಜ್ಯದ ಡಿಜಿ, ಐಜಿಪಿ ಹುದ್ದೆಯ ಪ್ರಕ್ರಿಯೆ ಆರಂಭವಾಗಿದ್ದಾಗ ಆ ಹುದ್ದೆಗೆ ಬಿಪಿನ್ ಗೋಪಾಲಕೃಷ್ಣ ಅವರ ಹೆಸರ ಕೇಳಿಬಂದಿತ್ತು. ಪೊಲೀಸ್ ಇಲಾಖೆಯಲ್ಲಿ ಸುಧೀರ್ಘ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಅವರ ನಿಧನಕ್ಕೆ ರಾಜ್ಯದ ಜನರ ಕಂಬನಿ ಮಿಡಿದಿದ್ದಾರೆ.
POPULAR STORIES :
100% ಕಾಮಿಡಿ, ಸಖತ್ ಮೂವಿ ಈಗಲೇ ನೋಡಿ ಸ್ವಾಮಿ..!
ಐಪಿಎಲ್ ಸೀಸನ್ 9ರಲ್ಲಿ ಪ್ರೇಕ್ಷಕನೇ 3ನೇ ಅಂಪೈರ್ ಅಂತೆ..!
ಟ್ಯಾಂಕರ್ ಮುಷ್ಕರದ ಎಫೆಕ್ಟ್..! ಪೆಟ್ರೋಲ್ ಸಿಗ್ದಿದ್ರೇ ಏನಾಗುತ್ತೆ ಗೊತ್ತಾ..?
ಆರು ಪ್ರಶ್ನೆ ಪತ್ರಿಕೆಗಳು `ಲೀಕ್’, ಬೆಚ್ಚಿಬೀಳಿಸಿದ ಸಿಐಡಿ ತನಿಖೆ..!?
ಭಾರತೀಯ ನಟಿ ಜೊತೆ ಒಬಾಮಾ ಡಿನ್ನರ್..!
ಭಾರತದ ಮೇಲೆ ಗೂಬೆ ಕೂರಿಸಿದ ಪಾಕಿಸ್ತಾನ..!? ಈ ಜನ್ಮದಲ್ಲಿ ಇವ್ರಿಗೆ ಬುದ್ಧಿ ಬರಲ್ಲ ಬಿಡಿ..!!
ಅಶ್ಲೀಲ ಚಿತ್ರಗಳನ್ನು ನೋಡುವುದು ತಪ್ಪಲ್ಲ..!? ಲವ್ ಗೇಮ್ ಚಿತ್ರದಲ್ಲಿ ಅಂಥದ್ದೇನಿದೆ..?