ಸೋಶಿಯಲ್ ಮೀಡಿಯಾದಲ್ಲೀಗ ಶೆಟ್ರು ಹವಾ…! ವೈರಲ್ ಆಯ್ತು ‘ಜೆ.ಪಿ’ ಅವರ ಘರ್ಜನೆ…!

Date:

ಜಯ ಪ್ರಕಾಶ್ ಶೆಟ್ಟಿ, ಯಾರಿಗೆ ತಾನೆ ಗೊತ್ತಿಲ್ಲ ಹೇಳಿ? ಕನ್ನಡ ದೃಶ್ಯ ಮಾಧ್ಯಮ ಲೋಕದಲ್ಲಿ ತನ್ನದೇ ಛಾಪು ಮೂಡಿಸಿರುವ ಪತ್ರಕರ್ತರು. ಅನ್ಯಾಯದ ವಿರುದ್ಧದ ದನಿಯಾಗಿ ಕನ್ನಡಿಗರ ಮನ ಗೆದ್ದಿರುವ ನಿರೂಪಕರು, ಪತ್ರಕರು.
ಕನ್ನಡ ಪತ್ರಿಕೋದ್ಯಮ ಕಂಡಿರುವ ಅಪರೂಪದ ಪತ್ರಕರ್ತ, ಕಂಚಿನ ಕಂಠದ ನಿರೂಪಕರಾದ ಜಯಪ್ರಕಾಶ್ ಶೆಟ್ಟಿ ಅವರು ಸೋಶಿಯಲ್ ಮೀಡಿಯಾದಲ್ಲೂ ದೂಳೆಬ್ಬಿಸುತ್ತಿದ್ದಾರೆ…! ಈಗ ಸೋಶಿಯಲ್ ಮೀಡಿಯಾದಲ್ಲಿ ಈ ಶೆಟ್ರುದ್ದೇ ಹವಾ…!

 

ವರುಣ ರುದ್ರ ನರ್ತನಕ್ಕೆ ಕೊಡಗು ನಲುಗಿರುವ ಕೊಡಗಿನ ನೆರವಿಗೆ ಧಾವಿಸುವಂತೆ ತಮ್ಮ ನ್ಯೂಸ್ ಚಾನಲ್ ನ್ನು ಮೂಲಕ ಇವರು ಕರೆಕೊಟ್ಟಾಗ ಸಾಗರೋಪಾದಿಯಲ್ಲಿ ಅಗತ್ಯ ವಸ್ತುಗಳು ಸುವರ್ಣ ಚಾನಲ್ ತಲುಪಿದವು. ಇವುಗಳನ್ನು ಸಂತ್ರಸ್ತರಿಗೆ ತಲುಪಿಸುವ ಕಾರ್ಯ ಸುವರ್ಣ ತಂಡದಿಂದಾಯಿತು. ಅದಕ್ಕಿಂತ ಹೆಚ್ಚಾಗಿ ಈಗ ಈ ಶೆಟ್ರು ಸೋಶಿಯಲ್ ಮೀಡಿಯಾದಲ್ಲಿ ಹವಾ ಸೃಷ್ಠಿಸಿರೋದು ಲೋಕೋಪಯೋಗಿ ಸಚಿವ ಎಚ್ ಡಿ ರೇವಣ್ಣ ಅವರ ವರ್ತನೆ ಖಂಡಿಸಿದ್ದಕ್ಕೆ…!

ಹೌದು, ನೆರೆ ಸಂತ್ರಸ್ತರಿಗೆ ಸಚಿವ ರೇವಣ್ಣ ಬಿಸ್ಕೇಟ್ ಎಸೆದಿರೋದನ್ನು ಗಟ್ಟಿ ದನಿಯಲ್ಲಿ ಪ್ರಶ್ನಿಸಿದವರು ಜಯಪ್ರಕಾಶ್ ಶೆಟ್ಟಿ. ಸುವರ್ಣ ಪರದೆ ಅಲಂಕರಿಸಿ ರೇವಣ್ಣ ಅವರನ್ನು ಹಿಗ್ಗಾಮುಗ್ಗಾ ಜಾಡಿಸಿದ ಇವರನ್ನು ನಾಡಿನ ಜನ ಕೊಂಡಾಡುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಇವರ ಘರ್ಜನೆ ಸಿಕ್ಕಾಪಟ್ಟೆ ವೈರಲ್ ಆಗಿದೆ. ಆ ವೀಡಿಯೋವನ್ನು ಇಲ್ಲಿ ನೋಡಿ..

ಹಾಗೇ ಈ ಹಿಂದೆ ಇವರ ಬಗ್ಗೆ ನಾವು ಪ್ರಕಟಿಸಿದ್ದ ಲೇಖನ ಇಲ್ಲಿದೆ ಕ್ಲಿಕ್ ಮಾಡಿ. ಅಂದು ಓದದೇ ಇದ್ದರೆ ಇಂದು ಓದಿ.

 

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...