ನಾಡದೇವಿ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಮೈಸೂರು ಭಾಗದ ಕ್ಷೇತ್ರಗಳ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿಯನ್ನ ಜಿ.ಟಿ.ದೇವೇಗೌಡ ಘೋಷಿಸಿದ್ದಾರೆ. ಚಾಮುಂಡೇಶ್ವರಿಗೆ ಜಿ.ಟಿ.ದೇವೇಗೌಡ, ಹುಣಸೂರಿಗೆ ಪುತ್ರ ಹರೀಶ್ ಗೌಡ, ಕೆ.ಆರ್.ನಗರಕ್ಕೆ ಸಾ.ರಾ.ಮಹೇಶ್, ಪಿರಿಯಾಪಟ್ಟಣಕ್ಕೆ ಕೆ.ಮಹದೇವ್, ಟಿ.ನರಸೀಪುರಕ್ಕೆ ಅಶ್ವಿನ್ ಕುಮಾರ್, H.D.ಕೋಟೆಗೆ ಜಯಪ್ರಕಾಶ್ಗೆ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲಿದ್ದಾರೆ ಎಂದು ತಿಳಿಸಿದ್ದಾರೆ. ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಅಭ್ಯರ್ಥಿಗಳನ್ನ ಜಿಟಿದೇವೇಗೌಡ್ರು ಘೋಷಿಸಿದ್ರು. ನಾನು ನಿನ್ನೆಯಿಂದಲೇ ಜೆಡಿಎಸ್ ಸಂಘಟನೆಯಲ್ಲಿ ತೊಡಗಿದ್ದೇನೆ. ನನ್ನ ಮನಸ್ಸು ಮೂರು ವರ್ಷಗಳ ನಂತರ ಸಮಾಧಾನದಲ್ಲಿದೆ. ನಾನು, ನನ್ನ ಕುಟುಂಬ ಖುಷಿಯಲ್ಲಿದೆ, ಯಾವ ಗೊಂದಲಗಳು ಇಲ್ಲ ಎಂದು ಸ್ಪಷ್ಟಪಡಿಸಿದ್ರು.. ಚಾಮುಂಡಿ ತಾಯಿಗೆ ಹೆಚ್ ಡಿ ದೇವೇಗೌಡರು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇನ್ನೊಂದು ತಿಂಗಳಿನಲ್ಲಿ ನಾನು ವಾಕ್ ಮಾಡುವ ಶಕ್ತಿಕೊಡು ಎಂದು ತಾಯಿ ಮುಂದೆ ಬೇಡಿ ಕೊಂಡಿದ್ದಾರೆ. ಜನವರಿ ತಿಂಗಳಿನಲ್ಲಿ ಹೆಚ್ ಡಿ ದೇವೇಗೌಡರು ಚಂಡಿಕಾ ಹೋಮ ನಡೆಸಲಿದ್ದಾರೆ. ಹೆಚ್ ಡಿ ದೇವೇಗೌಡರ ಉತ್ಸಾಹ ಕಂಡು ನಾವೇ ಅಚ್ಚರಿಗೆ ಒಳಗಾಗಿದ್ದೇವೆ. ಅವರೇ ನಮಗೆ ಪ್ರೇರಣೆಯಾಗಿದ್ದಾರೆ. ಅವರನ್ನು ಸಂತೋಷವಾಗಿಡುವುದೇ ನಮ್ಮ ಸಂತೋಷ ಎಂದು ತಿಳಿಸಿದ್ರು..
Latest article
ಪ್ರಜ್ವಲ್ ರೇವಣ್ಣ ಪ್ರಕರಣ: ತನಿಖೆ ನಡೆಸಲು SIT ತಂಡ ರಚಿಸಿ ರಾಜ್ಯ ಸರ್ಕಾರ ಆದೇಶ
ಬೆಂಗಳೂರು: ಹಾಸನದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ವಿಶೇಷ ತನಿಖಾ ತಂಡ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅಶ್ಲೀಲ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ...
ಪೆನ್ʼಡ್ರೈವ್ ಕೇಸ್: ಈ ವಿಷಯದಲ್ಲಿ ಯಾರಿಗೂ ಕ್ಷಮಿಸುವ ಪ್ರಶ್ನೆಯಿಲ್ಲ !
ಬೆಂಗಳೂರು: ಉಪ್ಪು ತಿಂದವನು ನೀರು ಕುಡಿಯಲೇಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೇ ನೀಡಿದ್ದು, ಈ ಪ್ರಕರಣದ ತನಿಖೆಯನ್ನು ಎಸ್ಐಟಿಗೆ...
ಚೊಂಬು ಹಿಡಿದು ಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಇಂದು ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ ಚೊಂಬು ಹಿಡಿದು ಪ್ರತಿಭಟನೆ ಕೈಗೊಂಡಿದ್ದಾರೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ರಣದೀಪ್ ಸಿಂಗ್ ಸುರ್ಜೇವಾಲ, ಸಚಿವರಾದ ಕೃಷ್ಣ...