‘ಕಾಲ’ ಬಿಡುಗಡೆಗೆ ಹೆಚ್ಚಿದ ವಿರೋಧ

Date:

ಕರ್ನಾಟಕದಲ್ಲಿ ‘ಕಾಲ’ ಸಿನಿಮಾ ಬಿಡುಗಡೆ ಸಂಬಂಧಿಸಿದಂತೆ ವಿರೋಧ ಹೆಚ್ಚಿದೆ.
ರಜನಿಕಾಂತ್ ಕ್ಷಮೆ ಕೇಳಿದರೂ ನಾವು ‘ ಕಾಲ’ ಬಿಡುಗಡೆಗೆ ಅವಕಾಶ ಮಾಡಿಕೊಡಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆ ನಡೆಸಿದೆ. ರಜನಿಕಾಂತ್ ಅಭಿನಯದ ಕಾಲ ಸಿನಿಮಾ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣ ಪ್ರತಿಭಟನೆ ನಡೆಸಿದೆ.
ಚಲನಚಿತ್ರ ವಾಣಿಜ್ಯ ಮಂಡಳಿ ಎದುರು ಪ್ರತಿಭಟನೆ ನಡೆಸಿದರು. ರಜನಿಕಾಂತ್ ವಿರುದ್ಧ ಘೋಷಣೆ ಕೂಗಿದರು. ಕಾವೇರಿ ವಿಚಾರದಲ್ಲಿ ರಜನಿಕಾಂತ್ ಕರ್ನಾಟಕದ ವಿರುದ್ಧ ನೀಡಿದ ಹೇಳಿಕೆಯೇ ಸಿನಿಮಾ‌ ಬಿಡುಗಡೆ ವಿರೋಧಕ್ಕೆ ಕಾರಣ.‌


ಪ್ರತಿಭಟನಾಕಾರರ ಮನವಿ ಸ್ವೀಕರಿಸಿ ಮಾತಾಡಿದ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ ಗೋವಿಂದ್ , ರಜನಿಕಾಂತ್ ಅವರ ಕನ್ನಡ ವಿರೋಧಿ ಧೋರಣೆಯನ್ನು ನಾವು ಖಂಡಿಸ್ತೀವಿ. ಕಾಲ ಚಿತ್ರ ಬಿಡುಗಡೆಗೆ ಮಾಡದಂತೆ ಸಾಕಷ್ಟು ಸಂಘಟನೆಗಳು ಒತ್ತಡ ಹೇರುತ್ತಿವೆ. ಇದಕ್ಕೆ ಸಂಬಂಧಿಸಿದಂತೆ ಚರ್ಚಿಸಿದ್ದೇವೆ. ಸದ್ಯದ ಮಟ್ಟಿಗೆ‌ ನೇರವಾಗಿ ನಾವು ನಿಷೇಧ ಹೇರಲು ಸಾಧ್ಯವಿಲ್ಲ. ವಿತರಣೆ ಹಕ್ಕು ಕೊಳ್ಳದಿರಲು ವಿತರಕರು ತೀರ್ಮಾನಿಸಿದ್ದಾರೆ. ಚಿತ್ರ ಪ್ರದರ್ಶನ ಮಾಡದಿರಲು ಚಿತ್ರಮಂದಿರಗಳ ಮಾಲೀಕರು ನಿರ್ಧರಿಸಿದ್ದಾರೆ. ಹೀಗಾಗಿ ಕಾಲ ಸಿನಿಮಾ ರಾಜ್ಯದಲ್ಲಿ ಬಿಡುಗಡೆ ಆಗಲ್ಲ ಎಂದು‌ ಹೇಳಿದರು.

Share post:

Subscribe

spot_imgspot_img

Popular

More like this
Related

ಸಮಾಜದಲ್ಲಿ ದ್ವೇಷಪೂರಿತ ಭಾಷಣ ಮಾಡುವವರ ವಿರುದ್ಧ FIR: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಸಮಾಜದಲ್ಲಿ ದ್ವೇಷಪೂರಿತ ಭಾಷಣ ಮಾಡುವವರ ವಿರುದ್ಧ FIR: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ಮಂಗಳೂರು:...

ನಡು ರಸ್ತೆಯಲ್ಲೇ ಹಲ್ಲೆ; ಮಾಜಿ ಶಾಸಕ ಬೆಳ್ಳಿ ಪ್ರಕಾಶ್ ಅಳಿಯನ ಮೇಲೆ ದಾಳಿ!

ನಡು ರಸ್ತೆಯಲ್ಲೇ ಹಲ್ಲೆ; ಮಾಜಿ ಶಾಸಕ ಬೆಳ್ಳಿ ಪ್ರಕಾಶ್ ಅಳಿಯನ ಮೇಲೆ...

ಕರ್ನಾಟಕದಲ್ಲಿ ವರುಣಾರ್ಭಟ: ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್​ ಘೋಷಣೆ

ಕರ್ನಾಟಕದಲ್ಲಿ ವರುಣಾರ್ಭಟ: ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್​ ಘೋಷಣೆ ಬೆಂಗಳೂರು: ರಾಜ್ಯದಾದ್ಯಂತ...

ಪತಿಯ ಕಿರುಕುಳಕ್ಕೆ ಬೇಸತ್ತು ಮಹಿಳೆ 3ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನ!

ಪತಿಯ ಕಿರುಕುಳಕ್ಕೆ ಬೇಸತ್ತು ಮಹಿಳೆ 3ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನ! ಬೆಂಗಳೂರು:...