ಕನ್ನಡದಲ್ಲಿಯೇ ಮನವಿ ಮಾಡಿದ ರಜಿನಿಕಾಂತ್…!

Date:

‘ಕಾಲ’ ಸಿನಿಮಾ ಬಿಡುಗಡೆಯಾಗುತ್ತಿರುವ ಚಿತ್ರಮಂದಿರಗಳಲ್ಲಿ ಸೂಕ್ತ ಭದ್ರತೆ ಒದಗಿಸುವಂತೆ ರಜನಿಕಾಂತ್ ಮುಖ್ಯಮಂತ್ರಿ ಎಚ್ ಡಿ ಕುಮಾರ ಸ್ವಾಮಿ ಅವರಿಗೆ ಮನವಿ ಮಾಡಿದ್ದಾರೆ.
‘ನಾನೇನು ತಪ್ಪು ಮಾಡಿಲ್ಲ. ಕಾವೇರಿ ವಿಚಾರವಾಗಿ ಸುಪ್ರೀಂಕೋರ್ಟ್ ಏನು ಹೇಳಿದೆಯೋ ಅದನ್ನೇ ನಾನೂ ಹೇಳಿದ್ದೇನೆ. ಈ ಸಿನಿಮಾವನ್ನು ಯಾರು ನೋಡಬೇಕು ಅಂತಿದ್ದಾರೋ ಅವರಿಗೆ ತೊಂದರೆ ಕೊಡ್ಬೇಡಿ. ಸಿನಿಮಾ ರಿಲೀಸ್ ಆಗೋದಕ್ಕೆ‌ ಸಹಕಾರ ನೀಡಿ ಅಂತ ನಾನು ಬಹಳ‌ ನಮ್ರತೆಯಿಂದ ತಮ್ಮ ಬಳಿ ಕೇಳಿ ಕೊಳ್ತೀನಿ” ಎಂದು ಕನ್ನಡದಲ್ಲೇ ರಜನಿಕಾಂತ್ ಕೇಳಿಕೊಂಡಿದ್ದಾರೆ.


ಕರ್ನಾಟಕದಲ್ಲಿ ಕಾಲ ಸಿನಿಮಾ ಬಿಡುಗಡೆಗೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಕಾಲ ಚಿತ್ರತಂಡ ಹೈಕೋರ್ಟ್ ಮೊರೆ ಹೋಗಿತ್ತು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ , ಕರ್ನಾಟಕದಲ್ಲಿ ಕಾಲ ಚಿತ್ರ ಪ್ರದರ್ಶನಕ್ಕೆ ಸಂಬಂಧಿಸಿದಂತೆ ಯಾರನ್ನೂ ಬಲವಂತ ಪಡಿಸಲಾಗದು. ಚಿತ್ರಮಂದಿರಗಳಿಗೆ ಭದ್ರತೆ ನೀಡೋದನ್ನು ಪರಿಗಣಿಸಬಹುದಷ್ಟೇ ಎಂದು ಹೇಳಿತ್ತು.


ಭದ್ರತೆ , ಕಾನೂನು ಸುವ್ಯವಸ್ಥೆ ಸರ್ಕಾರದ ಹೊಣೆ.‌ಇದರಲ್ಲಿ ವಿಫಲವಾದರೆ ನ್ಯಾಯಾಲಯಕ್ಕೆ ಬನ್ನಿ. ಸಂಘಟನೆಗಳ ಬೆದರಿಕೆ ಇದ್ದರೆ ಸರ್ಕಾರದ ಗಮನಕ್ಕೆ‌ ತನ್ನಿ ಎಂದು ಕೋರ್ಟ್ ಹೇಳಿತ್ತು. ಈಗ ರಜಿನಿಕಾಂತ್ ಸಹ ಚಿತ್ರಮಂದಿರಗಳಿಗೆ ಭದ್ರತೆ ನೀಡುವಂತೆ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದ್ದಾರೆ.

Share post:

Subscribe

spot_imgspot_img

Popular

More like this
Related

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ ಬೆಂಗಳೂರು:- ರಾಜ್ಯದಲ್ಲಿ...

ಮೀನು ಹಿಡಿಯುತ್ತಿದ್ದ ಬಾಲಕರನ್ನು ಮಾತನಾಡಿಸಿದ ಟಿಬಿ ಜಯಚಂದ್ರ

ಮೀನು ಹಿಡಿಯುತ್ತಿದ್ದ ಬಾಲಕರನ್ನು ಮಾತನಾಡಿಸಿದ ಟಿಬಿ ಜಯಚಂದ್ರ ಶಿರಾ ಶಾಸಕರಾದ ಹಾಗೂ ದೆಹಲಿಯ...

Movie ticket price: ಇಂದಿನಿಂದ ಚಿತ್ರಮಂದಿರಗಳಲ್ಲಿ ಏಕರೂಪ ಟಿಕೆಟ್ ದರ ಜಾರಿ!

Movie ticket price: ಇಂದಿನಿಂದ ಚಿತ್ರಮಂದಿರಗಳಲ್ಲಿ ಏಕರೂಪ ಟಿಕೆಟ್ ದರ ಜಾರಿ! ಬೆಂಗಳೂರು:...