No menu items!
5.2 C
Munich
Friday, April 24, 2026

ಈ ಅಧಿವೇಶನದಲ್ಲೆ ಕಂಬಳಕ್ಕೆ ವಿಧೇಯಕ ಮಂಡಿಸುವೆ: ಸಿಎಂ ವಿಶ್ವಾಸ

Must read

ಕರಾವಳಿಯ ಸಾಂಸ್ಕೃತಿಕ ಕ್ರೀಡೆಗೆ ಹೈಕೋರ್ಟ್ ಒಪ್ಪಿಗೆ ಸೂಚಿಸಬೇಕು ಈ ಕ್ರೀಡೆಯ ಮೇಲೆ ಹಾಕಲಾಗಿರುವ ನಿಷೇಧವನ್ನು ರದ್ದು ಮಾಡ್ಬೇಕು ಎಂದು ಮಲೆನಾಡು ಹಾಗೂ ಕರಾವಳಿ ಪ್ರದೇಶಗಳಾದ್ಯಂತ ಭಾರಿ ಪ್ರತಿಭಟನೆಗಳು ನಡೆಯುತ್ತಿರುವ ಬೆನ್ನಲ್ಲೆ ಸರ್ವ ಪಕ್ಷಗಳು ಕಂಬಳಕ್ಕೆ ಬೆಂಬಲವಾಗಿ ನಿಂತಿದೆ. ಸಾಂಸ್ಕೃತಿಕ ಕ್ರೀಡೆ ಕಂಬಳಕ್ಕೆ ಸಂಬಂಧಿಸಿದಂತೆ ಪ್ರಸಕ್ತ ವರ್ಷದಲ್ಲೆ ವಿಧೇಯಕ ಮಂಡಿಸುವುದಾಗಿ ಹೇಳಿ ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನ ಸಭೆಗೆ ತಿಳಿಸಿದ್ದಾರೆ. ಇಂದು ಸದನದಲ್ಲಿ ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲಿ ಬಿಜೆಪಿ ಶಾಸಕರಾದ ಸುನೀಲ್ ಕುಮಾರ್ ಹಾಗೂ ರಘು ಕಂಬಳದ ಫಲಕ ಹಿಡಿದುಕೊಂಡು ನಮಗೆ ಕಂಬಳ ಬೇಕು ಎಂಬ ಘೊಷಣೆಗಳನ್ನು ಕೂಗತೊಡಗಿದ್ರು. ಈ ವೇಳೆ ಮಧ್ಯ ಪ್ರವೇಶ ಮಾಡಿದ ಮುಖ್ಯಮಂತ್ರಿಗಳು ನೀವು ಕೇಳೋಕು ಮೊದ್ಲೆ ಕಂಬಳಕ್ಕೆ ವಿಧೇಯಕ ತರಲು ತೀರ್ಮಾನಿಸಿದ್ದೇನೆ. ನಿಮ್ಮ ಪ್ರಚಾರಕ್ಕಾಗಿ ನೀವು ಹೀಗೆಲ್ಲಾ ಮಾಡ್ತಾ ಇದ್ದೀರ ಎಂದು ಗೇಲಿ ಮಾಡಿದ್ರು. ನಂತರ ಸಭಾಧ್ಯಕ್ಷರು ಪ್ರಶ್ನೋತ್ತರ ಕಾರ್ಯ ಕಲಾಪಗಳಲ್ಲಿ ತೊಡಗಿಕೊಂಡರು.

Like us on Facebook  The New India Times

ತಾಜಾ ಸುದ್ದಿಗಾಗಿ ಇಂದೇ ವಾಟ್ಸಾಪ್ ಮಾಡಿ ರಿಜಿಸ್ಟರ್ ಆಗಿ : 97316 23333

POPULAR  STORIES :

ಈ ನಟನ ಪ್ರತಿ ತಿಂಗಳ ಖರ್ಚು 13.5 ಕೋಟಿ ಅಂತೆ

ತಮಿಳಿನ ಪೂಜೈ ರಿಮೇಕ್ ಚಿತ್ರದಲ್ಲಿ ಪುನೀತ್ ಹೀರೋ.

ಸತ್ರೂ ಲವ್ ಮ್ಯಾರೇಜ್ ಆಗಲ್ವಂತೆ ಈ ನಟಿ.

ಹಳ್ಳಿಡಾಕ್ಟ್ರು – ಇವರಿಂದಲೇ ಹಳ್ಳಿಯ ಸೊಗಡು ಇನ್ನು ಉಳಿದಿರೋದು.

ವಿಷ್ಣುದಾದರಿಂದ ಸೂಪರ್‍ಸ್ಟಾರ್ ಆದ್ರಂತೆ ಈ ನಟ..!

ಮ್ಯಾಟ್ರಿಮೋನಿ ವೆಬ್‍ಸೈಟ್‍ಗಳಲ್ಲಿ ನಂಬರ್ ಕೊಡೋಕು ಮುನ್ನ ಈ ಸ್ಟೋರಿನ ಮಿಸ್ ಮಾಡ್ದೆ ಓದಿ

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article