ಗಣೇಶ ಹಬ್ಬಕ್ಕೆ ಕನ್ನಡ ದೇಶದೊಳ್ ಹಾಡು ಬಿಡುಗಡೆ

Date:

ದಿನದಿಂದ ದಿನಕ್ಕೆ ಕುತೂಹಲ ಗರಿಗೆದರಿಸುತ್ತಿರುವ ‘ಕನ್ನಡ ದೇಶದೊಳ್’ ಸಿನಿಮಾ ನವೆಂಬರ್ 1ರಂದು ಬಿಡುಗಡೆ ಆಗಲಿದೆ ಎಂಬುದು ನಿಮಗೆ ಈಗಾಗಲೇ ಗೊತ್ತಿದೆ. ಇದೀಗ ತಂಡ ಗೌರಿ-ಗಣೇಶ ಹಬ್ಬದಂದು ತನ್ನ ಮೊದಲ ಹಾಡನ್ನು ಬಿಡುಗಡೆ ಮಾಡಲು ತಯಾರಾಗಿದೆ.

ಕಳೆದ ಮೂರು ವರ್ಷಗಳಿಂದ ಕನ್ನಡದ ಬಗ್ಗೆ ವಿನೂತನ ರೀತಿಯಲ್ಲಿ ಅಭಿಯಾನ ಮಾಡಿಕೊಂಡು ಬರುತ್ತಿರುವ ಯುವಕರ ತಂಡ ಮಾಡಿರುವ ಸಿನಿಮಾವೇ ಈ‌ ‘ಕನ್ನಡ ದೇಶದೊಳ್’….!

ಸಾಮಾಜಿಕ ಜಾಲತಾಣಗಳಲ್ಲಿ ಈಗಾಗಲೇ ದೂಳೆಬ್ಬಿಸಿರುವ ತಂಡ ಈಗ ಸಿನಿಮಾ‌ ಮೂಲಕ ಕರುನಾಡ ಸಂಸ್ಕೃತಿ, ಸಂಪ್ರದಾಯ , ಆಚರಣೆ, ಇತಿಹಾಸವನ್ನು, ಶ್ರೀಮಂತಿಕೆಯನ್ನು ಸಾರಲಿದೆ. ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವ ಸಂಭ್ರಮ…ಇಂದೇ ‘ಕನ್ನಡ ದೇಶದೊಳ್’ ಬಿಡುಗಡೆ ಮಾಡಲು ತಂಡ ಉತ್ಸುಕವಾಗಿದೆ.

ಈಗಾಗಲೇ ವಿಭಿನ್ನ ರೀತಿಯಲ್ಲಿ ಅದ್ಧೂರಿಯಾಗಿ ತನ್ನ ಸಿನಿಮಾವನ್ನು ಪ್ರಚಾರ ಮಾಡುತ್ತಿದೆ ಉತ್ಸಾಹಿ ಯುವಕರ ತಂಡ.‌ ಕನ್ನಡ ದೇಶದೊಳ್ ಎಂಬ ಶೀರ್ಷಿಕೆಯನ್ನು ಹೊಂದಿರುವ ಅಂಗಿಯನ್ನು ಸಿನಿಮಾ, ಕ್ರೀಡೆ, ಸಾಹಿತ್ಯ ಹೀಗೇ ಬೇರೆ ಬೇರೆ ಕ್ಷೇತ್ರದ ಸಾಧಕರಿಗೆ ನೀಡಿ ಅವರ ಶುಭಹಾರೈಕೆಯನ್ನು ಪಡೆಯುತ್ತಿದ್ದಾರೆ. ಆಟೋ, ಬಸ್, ಅಂಗಡಿಯ ಮುಂಗಟ್ಟು, ಬೈಕ್, ಕ್ಯಾಬ್ ಹೀಗೆ ಎಲ್ಲಾ ಕಡೆ ಸಿನಿಮಾ ಶೀರ್ಷಿಕೆ ಪ್ರಚಾರ ಮಾಡಿದೆ ಚಿತ್ರತಂಡ.

 

ಕನ್ನಡ ದೇಶದೊಳ್ ಎಂಬ ಶೀರ್ಷಿಕೆಯಲ್ಲೇ ಕನ್ನಡದ ಗಟ್ಟಿತನವಿದೆ, ಅಭಿಮಾನವಿದೆ…ಶೀರ್ಷಿಕೆಯೇ ಆಕರ್ಷಣೀಯವಾಗಿದ್ದು, ಜನರನ್ನು ಸೆಳೆಯುತ್ತಿದ್ದು ದೊಡ್ಡಮಟ್ಟಿನ ನಿರೀಕ್ಷೆ ಹುಟ್ಟುಹಾಕಿದೆ.
ಅವಿರಾಮ್ ಕಂಠೀರವ ಎಂಬ ನವ ನಿರ್ದೇಶಕ ಈ ಸಿನಿಮಾ ಮೂಲಕ ನಿರ್ದೇಶಕರಾಗಿ ಕನ್ನಡ ಸಿನಿರಂಗಕ್ಕೆ ಪರಿಚಿತರಾಗುತ್ತಿದ್ದಾರೆ. ಜೆ ಎಸ್ ಎಮ್ ಪ್ರೊಡಕ್ಷನ್ ನವರು ಸಿನಿಮಾ ನಿರ್ಮಿಸುತ್ತಿದ್ದಾರೆ.

ಚಿತ್ರದಲ್ಲಿ 7 ಹಾಡುಗಳಿವೆ. ರಾಜೇಶ್ ಕೃಷ್ಣನ್, ಅನನ್ಯ ಭಟ್, ಸಿದ್ಧಾರ್ಥ್ ಬೆಳುಮನ್ನು, ಶಶಾಂಕ್ ಶೇಷಗಿರಿ, ಸ್ಪರ್ಶ, ಸಾತ್ವಿಕ್ ಹಾಡಿದ್ದಾರೆ. ಈಗಾಗಲೇ ಚಿತ್ರದ ಮೊದಲ ಪೋಸ್ಟರ್ ಬಿಡುಗಡೆಯಾಗಿದೆ.

Share post:

Subscribe

spot_imgspot_img

Popular

More like this
Related

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ...

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...