ತಮಿಳುನಾಡಿಗೆ 10ದಿನಗಳ ಕಾಲ ಪ್ರತಿದಿನ 3 ಸಾವಿರ ಕ್ಯೂಸೆಕ್ಸ್ ನೀರು ಬಿಡಲು ಆದೇಶ…!

admin
By admin
1 Min Read

ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವ ಕುರಿತಂತೆ ಇಂದು ದೆಹಲಿಯಲ್ಲಿ ನಡೆದ ಸಭೆಯಲ್ಲಿ ಕಾವೇರಿಯಿಂದ ತಮಿಳುನಾಡಿಗೆ 3 ಸಾವಿರ ಕ್ಯೂಸೆಕ್ಸ್ ನೀರನ್ನು ಹರಿಸಲು ಸಮಿತಿ ನಿರ್ಧರಿಸಿದ್ದಾರೆ.
ಇಂದು ನಡೆದ ಕಾವೇರಿ ಮೇಲುಸ್ಥುವಾರಿ ಸಮಿತಿ ನಡೆಸಿದ ಸಭೆಯಲ್ಲಿ ನಿರ್ಧರಿಸಿರುವಂತೆ ಮುಂದಿನ ಹತ್ತು ದಿನಗಳ ಕಾಲ ಕಾವೇರಿ ನೀರನ್ನು ತಮೀಳುನಾಡಿಗೆ ಸುಮಾರು 3 ಸಾವಿರ ಕ್ಯೂಸೆಕ್ಸ್ ನೀರು ಹರಿಸಲಾಗುವುದು ಎಂದು ಕಾವೇರಿ ಮೇಲುಸ್ಥುವಾರಿ ಸಮಿತಿ ಅಧ್ಯಕ್ಷರಾದ ಶಶಿ ಶೇಖರ್ ತಿಳಿಸಿದ್ದಾರೆ.
ಈ ಹಿಂದೆ ತಮಿಳುನಾಡಿಗೆ 12 ಸಾವಿರ ಕ್ಯೂಸೆಕ್ಸ್ ನೀರನ್ನು ಸೆ.20ರ ವರೆಗೆ ಹರಿಸಬೇಕು ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದ ಬೆನ್ನಲ್ಲೇ ರಾಜ್ಯದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದ್ದವು. ಆದರೆ ಇಂದು ದೆಹಲಿಯಲ್ಲಿ ನಡೆದ ಸಭೆಯ ಅಂತಿಮ ತೀರ್ಪು ಕೂಡ ರಾಜ್ಯಕ್ಕೆ ಮತ್ತೆ ಅನ್ಯಾಯವಾಗಿರುವ ಸ್ಪಷ್ಟತೆ ಎದ್ದು ಕಾಣುತ್ತಿದೆ. ಇನ್ನು ಸಮಿತಿಯ ನಿರ್ಧಾರದಿಂದ ರಾಜ್ಯದಲ್ಲಿ ಭಾರೀ ಖಂಡನೆ ವ್ಯಕ್ತವಾಗುತ್ತಿದ್ದು, ಈ ತೀರ್ಪಿನಿಂದ ನಾಳೆ ನಡೆಯುವ ಸುಪ್ರೀಂ ತೀರ್ಪಿನಲ್ಲೂ ರಾಜ್ಯಕ್ಕೆ ಅನ್ಯಾಯವಾಗುವ ಸೂಚನೆ ವ್ಯಕ್ತವಾಗಿದೆ ಎಂದು ತಿಳಿದು ಬಂದಿದೆ.

Like us on Facebook  The New India Times

POPULAR  STORIES :

ಚಲಿಸುತ್ತಿರುವ ಕಾರಿನಲ್ಲೇ ಯುವತಿಯರ ‘ಕಿಸ್ಸಿಂಗ್ ಕಿಸ್ಸಿಂಗ್’… ಆರ್.ಟಿ ನಗರದಲ್ಲಿ ಸರಣಿ ಅವಘಡ..!

ಚೀನಾ ತನ್ನ ದೇಶದ 6 ವರ್ಷದ ಮಕ್ಕಳನ್ನು ಭವಿಷ್ಯದ ಒಲಿಂಪಿಕ್ ದಿಗ್ಗಜರನ್ನು ಮಾಡಲು ಕೊಡುವ ಕಠಿಣ ತರಬೇತಿ..!

ತಾಮ್ರದ ಪಾತ್ರೆಯಲ್ಲಿ ಕೂಡಿಟ್ಟ ನೀರನ್ನು ಸೇವಿಸುವುದು ಉತ್ತಮ ಯಾಕೆ..?

ಗ್ರೀನ್ ಟೀ ಹುಚ್ಚು ನಿಮಗೂ ಇದೆಯಾ?

Share This Article