ಪ್ರಿಯಾಂಕ ಖರ್ಗೆ ಹೇಳಿಕೆಗೆ ಶಾಸಕ ಸಿಟಿ ರವಿ ಟಾಂಗ್

Date:

ಕಲ್ಯಾಣ ಕರ್ನಾಟಕ ಅಭಿವೃದ್ದಿ ಹಣಕಾಸಿನಲ್ಲಿ ಬಿಜೆಪಿಯು 40% ಕಮಿಷನ್ ಜೊಲ್ಲು ಸುರಿಸುತ್ತಿದ್ದಾರೆ ಎನ್ನುವ ಪ್ರಿಯಾಂಕ ಖರ್ಗೆ ಹೇಳಿಕೆಗೆ ಶಾಸಕ ಸಿಟಿ ರವಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ವಿಧಾನಸೌಧದಲ್ಲಿ ಮಾತನಾಡಿದ ಅವರು, ಪ್ರಿಯಾಂಕ ಖರ್ಗೆಯವರಿಗೆ ತನ್ನ ಕಾಲದಲ್ಲಿ ಆಗಿದ್ರೆ ಇನ್ನೂ ಜಾಸ್ತಿ ಸಿಗಬಹುದಿತ್ತೇನೋ ಅಂತಾ ಜೊಲ್ಲು ಸುರಿಸಿದರು ಅನಿಸುತ್ತೆ. 40 50 ವರ್ಷದಿಂದ ಯಾವ ಪ್ರಮಾಣದಲ್ಲಿ ಜೊಲ್ಲು ಸುರಿಸಿರಬಹುದು ಎಂಬುದು ಈ ಹೇಳಿಕೆಯಿಂದ ಗೊತ್ತಾಗುತ್ತದೆ ಎಂದು ಟಾಂಗ್ ಕೊಟ್ಟಿದ್ದಾರೆ. ಇನ್ನೂ ಚಿರತೆ ತರಿಸುವುದು ಮೋದಿ ಯೋಜನೆ ಅಲ್ಲ ಅನ್ನೋ ವಿಚಾರವಾಗಿ ಪ್ರತಿಕ್ರಿಯಿಸಿ, ಚಿರತೆ ತೆಗೆದುಕೊಂಡು ಬರುವುದು ಮೋತಿಲಾಲ್ ನೆಹರು ಅವರ ಕನಸು. ಆದ್ರೆ ಅದು ಮತ್ತಷ್ಟು ಅಡೆತಡೆಗಳನ್ನ ಎದುರಿಸಿತು ಎಂದರು. ಇನ್ನೂ ಕಾಂಗ್ರೆಸ್ ಹಮ್ಮಿಕೊಂಡಿರುವ ಭಾರತ್ ಜೋಡೋ ಯಾತ್ರೆ ವಿಚಾರವಾಗಿ ಮಾತನಾಡಿ, ಇದು ಭಾರತೀಯತೆಯನ್ನ ಜೋಡಿಸೋ ಉದ್ದೇಶ ಅಲ್ಲ. ಹಿಂದು ಮತ್ತು ಹಿಂದುತ್ವದ ಬಗ್ಗೆ ದ್ವೇಷದ ಭಾಷಣ ಮಾಡೋದು. ಚುನಾವಣಾ ಸಮಯದಲ್ಲಿ ನಾನು ಹಿಂದು ಎಂದು ಹೇಳುವುದು. ಇವೆಲ್ಲಾ ಚುನಾವಣೆ ಗಿಮಿಕ್ ಎಂದು ಸಿಟಿ ರವಿ ವ್ಯಂಗ್ಯವಾಡಿದರು.

Share post:

Subscribe

spot_imgspot_img

Popular

More like this
Related

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್ ಬಾಗಲಕೋಟೆ: ಮುಖ್ಯಮಂತ್ರಿ...

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ದಟ್ಟಣೆ

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ...

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ ಏನು..?

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ...

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ...