ಕಿಚ್ಚ ಸುದೀಪ್ ವಿರುದ್ಧ ಹಣ ವಂಚನೆ ಆರೋಪ

0
89

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ವಿರುದ್ಧ ಹಣ ವಂಚನೆ ಆರೋಪ ಕೇಳಿಬಂದಿದೆ.
ಖಾಸಗಿ ವಾಹಿನಿಯೊಂದರಲ್ಲಿ ಪ್ರಸಾರವಾಗುತ್ತಿದ್ದ ‘ವಾರುಸ್ದಾರ ‘ ಧಾರವಾಹಿ ಚಿತ್ರೀಕರಣ ಸಂದರ್ಭದಲ್ಲಿ ಬಳಸಿದ ತಮ್ಮ ಮನೆ ಮತ್ತು ಕಾಫಿ ಎಸ್ಟೇಟ್ ಗೆ ನಿಗದಿ ಪಡಿಸಿದ್ದ ಹಣ ನೀಡದೆ ವಂಚಿಸಿದ್ದಾರೆ ಎಂದು ಸುದೀಪ್ ವಿರುದ್ಧ ಎಸ್ಟೇಟ್ ಮಾಲೀಕ ದೀಪಕ್ ಮಯೂರ್ ಆರೋಪಿಸಿದ್ದಾರೆ.
ಸುದೀಪ್ ವಿರುದ್ಧ ಮಯೂರ್ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮತ್ತು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ದೂರು ನೀಡಿದ್ದಾರೆ.


ವಾರಸ್ದಾರ ಧಾರವಾಹಿಯನ್ನು ಸುದೀಪ್ ಅವರ ಕಿಚ್ಚ ಕ್ರಿಯೇಷನ್ ನಿರ್ಮಾಣ ಮಾಡಿತ್ತು. ಈ ಧಾರವಾಹಿಯ ಚಿತ್ರೀಕರಣಕ್ಕಾಗಿ ಚಿಕ್ಕಮಗಳೂರಿನ ದೀಪಕ್ ಮಯೂರ್ ಎಂಬುವವರ ಮನೆ ಮತ್ತು ಕಾಫಿ ತೋಟವನ್ನು ತಂಡ ಬಾಡಿಗೆಗೆ ಪಡೆದಿತ್ತು.
ಚಿತ್ರೀಕರಣದ ವೇಳೆ ಕಾಫಿ ತೋಟಕ್ಕೆ ಸಾಕಷ್ಟು ಹಾನಿಯಾಗಿದೆ.‌ಒಪ್ಪಂದಂತೆ ಹಣ ನೀಡದೇ ವಂಚಿಸಿದ್ದಾರೆ ಎಂಬುದು ಮಯೂರ್ ಅವರ ಆರೋಪ.‌

LEAVE A REPLY

Please enter your comment!
Please enter your name here