ಯುವಕ ನ ಮೇಲೆ‌ ಜಿ.ಪಂ‌ ಮಾಜಿ ಸದಸ್ಯರ ಮಗನಿಂದ ಹಲ್ಲೆ…

Date:

ಜಿಲ್ಲಾ ಪಂಚಾಯತಿ ಮಾಜಿ ಸದಸ್ಯರ ಮಗ ಮತ್ತು ಆತನ ಪುಡಿ ಗ್ಯಾಂಗ್ ಯುವಕನೊಬ್ಬನ ಮೇಲೆ ಹಲ್ಲೆ ನಡೆಸಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ.


ಗಿಣಿಗೇರಿ ಗ್ರಾಮದ ಮಾಜಿ ಸದಸ್ಯ ಮಾರುತೆಪ್ಪ ಹಲಗೇರಿ ಅವರ ಮಗ ವಿಜಯ್ ಮತ್ತು ಆತನ ಸ್ನೇಹಿತರು ಆರೋಪಿಗಳು. ಕೊಪ್ಪಳ ತಾಲೂಕಿನ ಕನಕಾಪುರ ಗ್ರಾಮದ ಗಣೇಶ್ ಹಲ್ಲೆಗೊಳಗಾದ ಯುವಕ.
ವಿಜಯ್ ಮತ್ತು ಆತನ ಸ್ನೇಹಿತರಾದ ಶಿವು, ಪರಶುರಾಮ್ ಅವರನ್ನೊಳಗೊಂಡ‌ 15 ಜನರ ತಂಡ ಗಣೇಶ್ ಅವರನ್ನು ಸುಮಾರು 3ಗಂಟೆಗಳ‌ ಕಾಲ ಕಟ್ಟಿ ಹಾಕಿ ಥಳಿಸಿದ್ದಾರೆ ಎನ್ನಲಾಗಿದೆ.


ಗಣೇಶ್ ಮೊಬೈಲ್ ಅಂಗಡಿಗೆ ಹೋದಾಗ ವಿಜಯ್ ಮತ್ತು ತಂಡದವರು ಬೈಕ್ ನಲ್ಲಿ ಹೊತ್ತೊಯ್ದು ಜಮೀನು ಒಂದರಲ್ಲಿ ಹಲ್ಲೆ ನಡೆಸಿದ್ದಾರೆ.‌ಹಳೆ ದ್ವೇಷವೇ ಇದಕ್ಕೆ ಕಾರಣ ಎನ್ನಲಾಗಿದ್ದು,ಗಣೇಶ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...