ಅಧಿಕಾರ ದುರ್ಬಳಕೆ ಮಾಡಿಕೊಂಡು ಚುನಾವಣೆ ಮಾಡಲು ಬಿಜೆಪಿ ಹೊರಟಿದೆ

Date:

ಅಧಿಕಾರ ದುರ್ಬಳಕೆ ಮಾಡಿಕೊಂಡು ಚುನಾವಣೆ ಮಾಡಲು ಬಿಜೆಪಿ ಹೊರಟಿದೆ ಎಂದು ಮಾಜಿ ಸಚಿವ ಕೃಷ್ಣ ಬೈರೇಗೌಡ ಕಿಡಿಕಾರಿದರು. ಈ ಸಂಬಂಧ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಮಾತನಾಡಿದ ಅವರು, ರಾಜಕೀಯಕ್ಕಾಗಿ ಬಿಜೆಪಿಯವರು ಒಬ್ಬರನ್ನೊಬ್ಬರು ಸಾಯಿಸುತ್ತಿದ್ದಾರೆ. ಹಿಂದೆ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಐಟಿ ಕ್ಯಾಪಿಟಲ್ ಮಾಡಿದ್ದೆವು. ಇಂದು ಬಿಜೆಪಿಯವರು ಪಾಥ್​ ಹೋಲ್ ಸಿಟಿ ಮಾಡಿದ್ದಾರೆ. ಅಧಿಕಾರ ದುರ್ಬಳಕೆ ಮಾಡಿಕೊಂಡು ಚುನಾವಣೆ ಮಾಡಲು ಹೊರಟಿದ್ದಾರೆ. ಧೈರ್ಯವಾಗಿ ಚುನಾವಣೆ ಎದುರಿಸುವ ಶಕ್ತಿ ಇಲ್ಲ. ಜನ ಸೋಲಿಸುತ್ತಾರೆ ಎಂಬ ಆತಂಕಕ್ಕೆ ಹೆದರಿ‌ ಮೀಸಲಾತಿ ಬಳಸಿಕೊಂಡು ರಾಜಕೀಯ ಮಾಡುತ್ತಿದ್ದಾರೆ. ಇಲಿ ಮಾರ್ಗದಲ್ಲಿ ಹೋಗುತ್ತಿದ್ದಾರೆ. ನಾರಿ ಶಕ್ತಿ ಎಂದು ಹೇಳಿ ಕಾಂಗ್ರೆಸ್ ಶಾಸಕರು ಇರುವ ಕ್ಷೇತ್ರಕ್ಕೆ ಮಹಿಳಾ ಮೀಸಲಾತಿ ನೀಡಿದ್ದಾರೆ. ಶೇ.50 ರಷ್ಟು ಮಹಿಳಾ ಮೀಸಲಾತಿ ನೀಡಿಲ್ಲ. ಮಹಿಳೆಯರ ಬಗ್ಗೆ ಕಾಳಜಿ ಇದ್ದರೆ ಮೀಸಲಾತಿ ಸರಿಯಾಗಿ ಹಂಚಿ, ಅನ್ಯಾಯ ಸರಿ ಮಾಡಬೇಕು. ಮಹಿಳೆಯರಿಗೆ ನ್ಯಾಯ ಒದಗಿಸಲು ಶ್ರಮಿಸುತ್ತೇವೆ. ಬಿಜೆಪಿಯ ಹೇಡಿ ರಾಜಕಾರಣಿಗಳು, ನರಿಗಳ ವಿರುದ್ಧ ಹೋರಾಡುತ್ತೇವೆ ಎಂದು ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ಬೀದಿ ನಾಯಿಗಳ ಹಾವಳಿ: ಇಬ್ಬರು ಮಕ್ಕಳ ಮೇಲೆ ದಾಳಿ, ಸಾರ್ವಜನಿಕರಲ್ಲಿ ಆತಂಕ

ಬೀದಿ ನಾಯಿಗಳ ಹಾವಳಿ: ಇಬ್ಬರು ಮಕ್ಕಳ ಮೇಲೆ ದಾಳಿ, ಸಾರ್ವಜನಿಕರಲ್ಲಿ ಆತಂಕ ಹಾವೇರಿ:...

ಬಳ್ಳಾರಿಯಲ್ಲಿ ಬ್ಯಾನರ್ ಗಲಾಟೆ: ಶಾಸಕ ಭರತ್ ರೆಡ್ಡಿ ಸೇರಿ 22 ಜನರ ವಿರುದ್ಧ ಪ್ರಕರಣ ದಾಖಲು

ಬಳ್ಳಾರಿಯಲ್ಲಿ ಬ್ಯಾನರ್ ಗಲಾಟೆ: ಶಾಸಕ ಭರತ್ ರೆಡ್ಡಿ ಸೇರಿ 22 ಜನರ...

ಬಳ್ಳಾರಿ ಫೈರಿಂಗ್ ಪ್ರಕರಣ: ಭರತ್ ರೆಡ್ಡಿ ಬಂಧನಕ್ಕೆ ಆರ್. ಅಶೋಕ್ ಆಗ್ರಹ

ಬಳ್ಳಾರಿ ಫೈರಿಂಗ್ ಪ್ರಕರಣ: ಭರತ್ ರೆಡ್ಡಿ ಬಂಧನಕ್ಕೆ ಆರ್. ಅಶೋಕ್ ಆಗ್ರಹ ಬೆಂಗಳೂರು:...

‘ನನ್ನನ್ನು ಫಿನಿಶ್ ಮಾಡಲು ಯತ್ನ’: ಗಾಲಿ ಜನಾರ್ದನ ರೆಡ್ಡಿ ಸ್ಫೋಟಕ ಆರೋಪ

‘ನನ್ನನ್ನು ಫಿನಿಶ್ ಮಾಡಲು ಯತ್ನ’: ಗಾಲಿ ಜನಾರ್ದನ ರೆಡ್ಡಿ ಸ್ಫೋಟಕ ಆರೋಪ ಬಳ್ಳಾರಿ:...