ಅಧಿಕಾರ ದುರ್ಬಳಕೆ ಮಾಡಿಕೊಂಡು ಚುನಾವಣೆ ಮಾಡಲು ಬಿಜೆಪಿ ಹೊರಟಿದೆ

Date:

ಅಧಿಕಾರ ದುರ್ಬಳಕೆ ಮಾಡಿಕೊಂಡು ಚುನಾವಣೆ ಮಾಡಲು ಬಿಜೆಪಿ ಹೊರಟಿದೆ ಎಂದು ಮಾಜಿ ಸಚಿವ ಕೃಷ್ಣ ಬೈರೇಗೌಡ ಕಿಡಿಕಾರಿದರು. ಈ ಸಂಬಂಧ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಮಾತನಾಡಿದ ಅವರು, ರಾಜಕೀಯಕ್ಕಾಗಿ ಬಿಜೆಪಿಯವರು ಒಬ್ಬರನ್ನೊಬ್ಬರು ಸಾಯಿಸುತ್ತಿದ್ದಾರೆ. ಹಿಂದೆ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಐಟಿ ಕ್ಯಾಪಿಟಲ್ ಮಾಡಿದ್ದೆವು. ಇಂದು ಬಿಜೆಪಿಯವರು ಪಾಥ್​ ಹೋಲ್ ಸಿಟಿ ಮಾಡಿದ್ದಾರೆ. ಅಧಿಕಾರ ದುರ್ಬಳಕೆ ಮಾಡಿಕೊಂಡು ಚುನಾವಣೆ ಮಾಡಲು ಹೊರಟಿದ್ದಾರೆ. ಧೈರ್ಯವಾಗಿ ಚುನಾವಣೆ ಎದುರಿಸುವ ಶಕ್ತಿ ಇಲ್ಲ. ಜನ ಸೋಲಿಸುತ್ತಾರೆ ಎಂಬ ಆತಂಕಕ್ಕೆ ಹೆದರಿ‌ ಮೀಸಲಾತಿ ಬಳಸಿಕೊಂಡು ರಾಜಕೀಯ ಮಾಡುತ್ತಿದ್ದಾರೆ. ಇಲಿ ಮಾರ್ಗದಲ್ಲಿ ಹೋಗುತ್ತಿದ್ದಾರೆ. ನಾರಿ ಶಕ್ತಿ ಎಂದು ಹೇಳಿ ಕಾಂಗ್ರೆಸ್ ಶಾಸಕರು ಇರುವ ಕ್ಷೇತ್ರಕ್ಕೆ ಮಹಿಳಾ ಮೀಸಲಾತಿ ನೀಡಿದ್ದಾರೆ. ಶೇ.50 ರಷ್ಟು ಮಹಿಳಾ ಮೀಸಲಾತಿ ನೀಡಿಲ್ಲ. ಮಹಿಳೆಯರ ಬಗ್ಗೆ ಕಾಳಜಿ ಇದ್ದರೆ ಮೀಸಲಾತಿ ಸರಿಯಾಗಿ ಹಂಚಿ, ಅನ್ಯಾಯ ಸರಿ ಮಾಡಬೇಕು. ಮಹಿಳೆಯರಿಗೆ ನ್ಯಾಯ ಒದಗಿಸಲು ಶ್ರಮಿಸುತ್ತೇವೆ. ಬಿಜೆಪಿಯ ಹೇಡಿ ರಾಜಕಾರಣಿಗಳು, ನರಿಗಳ ವಿರುದ್ಧ ಹೋರಾಡುತ್ತೇವೆ ಎಂದು ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ಅತೀ ಶೀಘ್ರದಲ್ಲಿ‌ ಸೆಲೆಬ್ರಿಟಿ ಪ್ರೋಬಾಲ್ ಮತ್ತು ವಾಲಿಬಾಲ್ ಟೂರ್ನಮೆಂಟ್

ಅತೀ ಶೀಘ್ರದಲ್ಲಿ‌ ಸೆಲೆಬ್ರಿಟಿ ಪ್ರೋಬಾಲ್ ಮತ್ತು ವಾಲಿಬಾಲ್ ಟೂರ್ನಮೆಂಟ್ ನಡೆಯಲಿದೆ. ಇದರ...

ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ: ಭ್ರಷ್ಟಾಚಾರ ಆರೋಪ ಹಿನ್ನೆಲೆ ಅಧಿಕಾರಿಗಳ ಮನೆ, ಕಚೇರಿಗಳ ಪರಿಶೀಲನೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ: ಭ್ರಷ್ಟಾಚಾರ ಆರೋಪ ಹಿನ್ನೆಲೆ ಅಧಿಕಾರಿಗಳ...

ಹೃದಯಾಘಾತಕ್ಕೆ ಮತ್ತೊಂದು ಬಲಿ: ಪಾಠ ಮಾಡುವಾಗಲೇ ಕುಸಿದು ಬಿದ್ದು ಶಿಕ್ಷಕ ಸಾವು!

ಹೃದಯಾಘಾತಕ್ಕೆ ಮತ್ತೊಂದು ಬಲಿ: ಪಾಠ ಮಾಡುವಾಗಲೇ ಕುಸಿದು ಬಿದ್ದು ಶಿಕ್ಷಕ ಸಾವು! ಹಾಸನ:...

ಪ್ರೇಯಸಿ ಪ್ರತಿಕ್ರಿಯಿಸದ ನೋವು: ಒಮನ್‌ನಲ್ಲಿ ಮಂಗಳೂರು ಯುವಕ ಆತ್ಮಹತ್ಯೆ!

ಪ್ರೇಯಸಿ ಪ್ರತಿಕ್ರಿಯಿಸದ ನೋವು: ಒಮನ್‌ನಲ್ಲಿ ಮಂಗಳೂರು ಯುವಕ ಆತ್ಮಹತ್ಯೆ! ಮಂಗಳೂರು: ಕಳೆದ ಒಂದು...