ಅಧಿಕಾರ ದುರ್ಬಳಕೆ ಮಾಡಿಕೊಂಡು ಚುನಾವಣೆ ಮಾಡಲು ಬಿಜೆಪಿ ಹೊರಟಿದೆ

0
49

ಅಧಿಕಾರ ದುರ್ಬಳಕೆ ಮಾಡಿಕೊಂಡು ಚುನಾವಣೆ ಮಾಡಲು ಬಿಜೆಪಿ ಹೊರಟಿದೆ ಎಂದು ಮಾಜಿ ಸಚಿವ ಕೃಷ್ಣ ಬೈರೇಗೌಡ ಕಿಡಿಕಾರಿದರು. ಈ ಸಂಬಂಧ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಮಾತನಾಡಿದ ಅವರು, ರಾಜಕೀಯಕ್ಕಾಗಿ ಬಿಜೆಪಿಯವರು ಒಬ್ಬರನ್ನೊಬ್ಬರು ಸಾಯಿಸುತ್ತಿದ್ದಾರೆ. ಹಿಂದೆ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಐಟಿ ಕ್ಯಾಪಿಟಲ್ ಮಾಡಿದ್ದೆವು. ಇಂದು ಬಿಜೆಪಿಯವರು ಪಾಥ್​ ಹೋಲ್ ಸಿಟಿ ಮಾಡಿದ್ದಾರೆ. ಅಧಿಕಾರ ದುರ್ಬಳಕೆ ಮಾಡಿಕೊಂಡು ಚುನಾವಣೆ ಮಾಡಲು ಹೊರಟಿದ್ದಾರೆ. ಧೈರ್ಯವಾಗಿ ಚುನಾವಣೆ ಎದುರಿಸುವ ಶಕ್ತಿ ಇಲ್ಲ. ಜನ ಸೋಲಿಸುತ್ತಾರೆ ಎಂಬ ಆತಂಕಕ್ಕೆ ಹೆದರಿ‌ ಮೀಸಲಾತಿ ಬಳಸಿಕೊಂಡು ರಾಜಕೀಯ ಮಾಡುತ್ತಿದ್ದಾರೆ. ಇಲಿ ಮಾರ್ಗದಲ್ಲಿ ಹೋಗುತ್ತಿದ್ದಾರೆ. ನಾರಿ ಶಕ್ತಿ ಎಂದು ಹೇಳಿ ಕಾಂಗ್ರೆಸ್ ಶಾಸಕರು ಇರುವ ಕ್ಷೇತ್ರಕ್ಕೆ ಮಹಿಳಾ ಮೀಸಲಾತಿ ನೀಡಿದ್ದಾರೆ. ಶೇ.50 ರಷ್ಟು ಮಹಿಳಾ ಮೀಸಲಾತಿ ನೀಡಿಲ್ಲ. ಮಹಿಳೆಯರ ಬಗ್ಗೆ ಕಾಳಜಿ ಇದ್ದರೆ ಮೀಸಲಾತಿ ಸರಿಯಾಗಿ ಹಂಚಿ, ಅನ್ಯಾಯ ಸರಿ ಮಾಡಬೇಕು. ಮಹಿಳೆಯರಿಗೆ ನ್ಯಾಯ ಒದಗಿಸಲು ಶ್ರಮಿಸುತ್ತೇವೆ. ಬಿಜೆಪಿಯ ಹೇಡಿ ರಾಜಕಾರಣಿಗಳು, ನರಿಗಳ ವಿರುದ್ಧ ಹೋರಾಡುತ್ತೇವೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here