No menu items!
14.4 C
Munich
Sunday, May 3, 2026

ರಾಜಕೀಯ ಉದ್ದೇಶಕ್ಕಾಗಿ ಪವನ್‍ರನ್ನು ಮೀಟ್ ಮಾಡಿದ್ದಲ್ಲ: ಕುಮಾರಸ್ವಾಮಿ

Must read

ಜ್ಯಾತ್ಯಾತಿತ ಜನತಾ ದಳದ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರ ಸ್ವಾಮಿಯವರು ಜನ ಸೇನಾ ಪಕ್ಷದ ಮುಖ್ಯಸ್ಥ ಹಾಗೂ ನಟ ಪವನ್ ಕಲ್ಯಾಣ್ ಅವರನ್ನು ಇಂದು ಭೇಟಿ ಮಾಡಿದ್ದು, ನಮ್ಮಿಬ್ಬರ ಭೇಟಿ ಹಿಂದೆ ರಾಜಕೀಯ ಉದ್ದೇಶವಿಲ್ಲ ಎಂದು ಸ್ಪಷ್ಟಪಡಿಸಿರುವ ಎಚ್ಡಿಕೆ, ಪವನ್ ನನ್ನ ಅಣ್ತಮ್ಮ ಇದ್ದ ಹಾಗೆ ನನ್ನ ಮಗನ ಸಿನಿಮಾದ ಕುರಿತಾಗಿ ಮಾತನಾಡಲು ಬಂದಿದ್ದೆ ಎಂದು ಹೇಳಿದ್ದಾರೆ.
ಮುಂಬರುವ ವಿಧಾನ ಸಭಾ ಚುನಾವಣೆಗೆ ಎಲ್ಲಾ ರಾಜಕೀಯ ಪಕ್ಷಗಳೂ ರಣತಂತ್ರ ರೂಪಿಸುತ್ತಿದ್ದು, ಮತದಾರರ ಮನಗೆದ್ದು ಅಧಿಕಾರ ಗದ್ದುಗೆ ಹಿಡಿಯಲು ವಿವಿಧ ರಿತಿಯಲ್ಲಿ ಕಸರತ್ತು ನಡೆಸುತ್ತಿವೆ. ಅದರಲ್ಲಿ ಜೆಡಿಎಸ್ ಕೂಡ ಹಿಂದೆ ಬಿದ್ದಿಲ್ಲ.
ಟಾಲಿವುಡ್ ಸೂಪರ್‍ಸ್ಟಾರ್ ಪವನ್ ಕಲ್ಯಾಣ್ ಅವರನ್ನು ಭೇಟಿ ಮಾಡುವ ಮೂಲಕ ಕರ್ನಾಟಕ-ಆಂಧ್ರ ಗಡಿ ಪ್ರದೇಶಗಳಲ್ಲಿ ಜೆಡಿಎಸ್ ಹವಾ ಎಬ್ಬಿಸಬೇಕೆಂದು ಯೋಜನೆ ರೂಪಿಸಿಕೊಂಡಿದ್ದಾರೆ ಎಂದು ಶಾಸಕ ಸಿಆರ್ ಮನೋಹರ್ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ವೈಟ್ ಅಂಡ್ ವೈಟ್‍ನಲ್ಲಿ ಮಿಂಚುತ್ತಿದ್ದ ಪವನ್ ಕಲ್ಯಾಣ್, ತಮ್ಮ ಸ್ಮಾರ್ಟ್ ಫೋನ್‍ನಲ್ಲಿ ಕುಮಾರಸ್ವಾಮಿ ಅವರ ಮಗನ ಜಾಗ್ವಾರ್ ಚಿತ್ರದ ಟೀಸರ್ ನೋಡಿ ಶುಭ ಹಾರೈಸಿದ್ದಾರೆ.

POPULAR  STORIES :

ಈ ಮಹಿಳೆ ಗರ್ಭ ಧರಿಸಿ ಬರೋಬ್ಬರಿ 17 ತಿಂಗಳಾಯ್ತು, ಇನ್ನೂ ಮಗೂನೇ ಜನಿಸಿಲ್ಲ ನೋಡಿ..!

ಪತ್ರಕರ್ತನನ್ನು ನೋಡಿದ ಆ ರೋಗಿ ವಿಚಿತ್ರವಾಗಿ ಮಾತಾಡ್ತಾನೆ..! ‘ಅನ್ವೇಷಿ’ ನೋಡಿದ್ರೆ ಎಲ್ಲವೂ ಅರ್ಥವಾಗುತ್ತೆ..!

ಬೆಳ್ಳಿ ತಾರೆಗೆ ಬಿಎಂಡಬ್ಲ್ಯೂ ಕಾರು, ಸಾಕ್ಷಿಗೆ ವಿಮಾನ ಟಿಕೆಟ್ ಗಿಫ್ಟ್…!

ನನ್ನ ಅಮ್ಮ ಹಾಗೂ ನನ್ನ ತಂದೆ ಆತ್ಮ ಸಂಗಾತಿಗಳು, ಜನುಮದ ಜೋಡಿ ಇದ್ದಹಾಗೆ….

ಓಣಂ ಹಬ್ಬಕ್ಕೆ ಆನ್‍ಲೈನ್‍ನಲ್ಲಿ ಮದ್ಯಪಾನ ಮಾರಾಟ..!

ಸಾವಿನ ಮನೆಗೆ ಬಾರ್ ಗರ್ಲ್ಸ್ ರನ್ನು ಕರುಸ್ಕೊಳ್ತಾರೆ…!

ಇಂದು ವಿಶ್ವ ಫೋಟೋಗ್ರಫಿ ದಿನ… ನೀವು ನೋಡಿ ಕೆಲವು ಅದ್ಭುತ ಚಿತ್ರಗಳು..!

ಆಸ್ಪತ್ರೆಯಲ್ಲಿ ಜನ ಕ್ಯೂ ನಲ್ಲಿ ನಿಂತಿದ್ದರೂ ಸರ್ಕಾರಿ ನೌಕರ ಏನ್ ಮಾಡ್ತಾ ಇದ್ದ..? ಈ ವಿಡಿಯೋ ನೋಡಿ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article