ಕಣ್ಣಿನಿಂದ 15 ಸೆಂ.ಮೀ ಹುಳವನ್ನು ಜೀವಂತವಾಗಿ ತೆಗೆದರು…!‌ ಇದು ನಡೆದಿದ್ದು ಕುಂದಾಪುರದಲ್ಲಿ…!

Date:

60 ವರ್ಷದ ವ್ಯಕ್ತಿಯೊಬ್ಬರ ಕಣ್ಣಿನಿಂದ 15 ಸೆ.ಮೀ ಉದ್ದದ ಹುಳವನ್ನು ಶಸ್ತ್ರಚಿಕಿತ್ಸೆ ಮೂಲಕ ಹೊರ ತೆಗೆದಿರುವ ಘಟನೆ ಕುಂದಾಪುರದಲ್ಲಿ ನಡೆದಿದೆ.‌
ಬಲಗಣ್ಣಿನ ನೋವಿನಿಂದ ಅನೇಕ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಕುಂದಾಪುರದ ನ್ಯೂ ಮೆಡಿಕಲ್ ಸೆಂಟರಿನ ನೇತ್ರ ತಜ್ಞ ಡಾ. ಶ್ರೀಕಾಂತ್ ಶೆಟ್ಟಿಯವರನ್ನು ಸಂಪರ್ಕಿಸಿದಾಗ ಕಣ್ಣಲ್ಲಿ ಜೀವಂತವಾಗಿ ಹುಳ ಹರಿದಾಡುತ್ತಿರುವುದು ಪತ್ತೆಯಾಗಿದೆ.

ಕಣ್ಣೊಳಗಿನ ಹುಳವನ್ನು ಔಷಧಿಗಳ ಮೂಲಕ ಸಾಯಿಸಿ ತೆಗೆದರೆ ಕಣ್ಣಿನ ಒಳಗೆ ಊತ ಬಂದು ದೃಷ್ಟಿಗೆ ತೊಂದರೆ ಆಗುವ ಸಾಧ್ಯತೆ ಇದ್ದರಿಂದ ಆ ಹುಳವನ್ನು ಒಂದು ಬದಿಗೆ ಬರುವಂತೆ ಮಾಡಿ ನಂತರ ಶಸ್ತ್ರ ಚಿಕಿತ್ಸೆಯ ಮೂಲಕ ಜೀವಂತವಾಗಿ ತೆಗೆದಿದ್ದಾರೆ.

ಈ ಹುಳು ವುಚೆರಿಯಾ ಬ್ಯಾನ್ಕ್ರಾಫ್ಟಿ ಎನ್ನುವ ಜಾತಿಯದ್ದು. ಇದು ಸೊಳ್ಳೆಗಳ ಮೂಲಕ ಹರಡುತ್ತದೆ ಎನ್ನಲಾಗಿದೆ. ಸೊಳ್ಳೆಗಳು ಕಚ್ಚಿದಾಗ ಇದರ ಲಾರ್ವಾಗಳು ರಕ್ತದಲ್ಲಿ ಸೇರಿ ಅಲ್ಲೇ ಬೆಳೆದು ಮೊಟ್ಟೆಯನ್ನಿಡುತ್ತವೆ. ಅಪರೂಪಕ್ಕೆ ಈ ಮೊಟ್ಟೆಗಳು ಕಣ್ಣಿನಲ್ಲಿ ಸೇರಿ ಅಲ್ಲೇ ಬೆಳೆದು ಹುಳುವಾಗಿ ಪರಿವರ್ತನೆ ಆಗುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.

Share post:

Subscribe

spot_imgspot_img

Popular

More like this
Related

ಕರ್ನಾಟಕ ರಾಜ್ಯೋತ್ಸವ 2025 ನೇ ಸಾಲಿನ ಪ್ರಶಸ್ತಿ ಪ್ರಕಟ; ಪ್ರಕಾಶ್‌ ರಾಜ್‌ ಸೇರಿ 70 ಮಂದಿಗೆ ಗೌರವ

ಕರ್ನಾಟಕ ರಾಜ್ಯೋತ್ಸವ 2025 ನೇ ಸಾಲಿನ ಪ್ರಶಸ್ತಿ ಪ್ರಕಟ; ಪ್ರಕಾಶ್‌ ರಾಜ್‌...

ಚಿತ್ತಾಪುರದಲ್ಲಿ RSS ಪಥಸಂಚಲನ: ಕಲಬುರಗಿ ಹೈಕೋರ್ಟ್ ಮಹತ್ವದ ಸೂಚನೆ

ಚಿತ್ತಾಪುರದಲ್ಲಿ RSS ಪಥಸಂಚಲನ: ಕಲಬುರಗಿ ಹೈಕೋರ್ಟ್ ಮಹತ್ವದ ಸೂಚನೆ ಕಲಬುರಗಿ: ಚಿತ್ತಾಪುರದಲ್ಲಿ ನವೆಂಬರ್...

ಟನಲ್ ರಸ್ತೆ ಬೇಡ ಹೇಳುವುದಕ್ಕೆ ಈ ತೇಜಸ್ವಿ ಸೂರ್ಯ ಯಾರು?: ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ

ಟನಲ್ ರಸ್ತೆ ಬೇಡ ಹೇಳುವುದಕ್ಕೆ ಈ ತೇಜಸ್ವಿ ಸೂರ್ಯ ಯಾರು?: ಡಿಸಿಎಂ...

ಮತ್ತೆ ಇಳಿಕೆಯ ಹಾದಿಗೆ ಬಂದ ಚಿನ್ನ, ಬೆಳ್ಳಿ ಬೆಲೆ! ಹೀಗಿದೆ ದರ

ಮತ್ತೆ ಇಳಿಕೆಯ ಹಾದಿಗೆ ಬಂದ ಚಿನ್ನ, ಬೆಳ್ಳಿ ಬೆಲೆ! ಹೀಗಿದೆ ದರ ಬೆಂಗಳೂರು:...