Lokayukta Raid: ರಾಜ್ಯದ ಹಲವೆಡೆ ಏಕಕಾಲಕ್ಕೆ ಲೋಕಾಯುಕ್ತ ದಾಳಿ

Date:

Lokayukta Raid: ರಾಜ್ಯದ ಹಲವೆಡೆ ಏಕಕಾಲಕ್ಕೆ ಲೋಕಾಯುಕ್ತ ದಾಳಿ

ಬೆಂಗಳೂರು: ರಾಜ್ಯಾದ್ಯಂತ ವಿವಿಧ ಇಲಾಖೆಯ ಅಧಿಕಾರಿಗಳ ಮನೆ, ಕಚೇರಿ ಮೇಲೆ ಬುಧವಾರ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಗಿದೆ.
ಬೆಂಗಳೂರು, ಮೈಸೂರು, ಕೊಪ್ಪಳ ಮತ್ತು ಬಳ್ಳಾರಿಯ ಸರ್ಕಾರಿ ಅಧಿಕಾರಿಗಳಿಗಳ ಮನೆಗಳ ಮೇಲೆ ದಾಳಿ ಮಾಡಲಾಗಿದೆ. ಆ ಮೂಲಕ ಶಾಕ್ ನೀಡಲಾಗಿದೆ. ಸರ್ಕಾರಿ ಅಧಿಕಾರಿಗಳಿಗಳ ಮನೆಗಳ ಮೇಲೆ ದಾಳಿ ಮಾಡಿರುವ ಲೋಕಾಯುಕ್ತ ಸದ್ಯ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದೆ. ಬೆಂಗಳೂರಿನಲ್ಲಿ ಐಎಎಸ್ ಸೇರಿ ಮೂವರು ಅಧಿಕಾರಿ ಮನೆ ಮೇಲೆ ಲೋಕಾ ದಾಳಿ ಮಾಡಿದೆ.
ಆರ್.ಟಿ.ನಗರದಲ್ಲಿರುವ ಹಿರಿಯ IAS ಅಧಿಕಾರಿ ವಾಸಂತಿ ಅಮರ್ ಮನೆ ಮೇಲೆ ದಾಳಿ ಮಾಡಲಾಗಿದೆ. ಸರ್ಕಾರಿ ಜಮೀನು ಅಕ್ರಮವಾಗಿ ಬೇರೆಯವರ ಹೆಸರಿಗೆ ವರ್ಗಾವಣೆ ಆರೋಪ ಕೇಳಿಬಂದಿದೆ. ವಾಸಂತಿ ಅಮರ್ ಬೆಂಗಳೂರು ನಗರ ವಿಶೇಷ ಡಿಸಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಸದ್ಯ ಇವರ ಮನೆಯಲ್ಲಿ ಪರಿಶೀಲನೆ ನಡೆಸಿದ್ದಾರೆ.

Share post:

Subscribe

spot_imgspot_img

Popular

More like this
Related

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ ಬೆಂಗಳೂರು:- ರಾಜ್ಯದಲ್ಲಿ...