No menu items!
13.5 C
Munich
Sunday, April 26, 2026

ಗಣಿತ ಮೇಷ್ಟ್ರೇ‌ ಇದನ್ನು ಓದಿ…!

Must read

ಗಣಿತ ಅಂದ್ರೆ ಕಬ್ಬಿಣದ ಕಡ್ಲೆ..! ಯಾವ್ ಸಬ್ಜೆಕ್ಟ್ ಆದ್ರೂ ಓಕೆ..ಗಣಿತ ಏಕೆ? ಎನ್ನೋದು ಬಹುತೇಕ ವಿದ್ಯಾರ್ಥಿಗಳನ್ನು ಕಾಡುವ ಪ್ರಶ್ನೆ…! ಗಣಿತ ಮೇಷ್ಟ್ರು ಶಾಲೆಗೆ ಬರ್ದೆ ಹೋಗ್ಲಿ ಅಂತ ದೇವ್ರಲ್ಲಿ ಪ್ರಾರ್ಥಿಸಿಕೊಳ್ಳೋ ಸ್ಟೂಡೆಂಟ್ಸ್ ಕೂಡ ಇದ್ದಾರೆ…! ಇವರೆಲ್ಲರಿಗಿಂತ ಇಲ್ಲೊಬ್ಬ ವಿದ್ಯಾರ್ಥಿ ಗಣಿತದಲ್ಲಿ ಕಡಿಮೆ ಅಂಕ ಬಂತು ಅಂತ ತನ್ನ ಟೀಚರ್ ಗೆ ಚಾಕುವಿನಿಂದ ಇರಿದಿದ್ದಾನೆ…!
ಈ ಘಟನೆ ನಡೆದಿದ್ದು ಹರಿಯಾಣದ ಝಜ್ಜರ್ ಜಿಲ್ಲೆಯ ಬಹದೂರ್ ಘರ್ ನ ಹರದಯಾಲ್ ಪಬ್ಲಿಕ್ ಶಾಲೆಯಲ್ಲಿ. ಇಲ್ಲಿನ 12 ನೇ‌ ತರಗತಿ ವಿದ್ಯಾರ್ಥಿ ಗಣಿತದಲ್ಲಿ ತನಗೆ ಕಡಿಮೆ ಮಾರ್ಕ್ಸ್ ಕೊಟ್ಟಿದ್ದಾರೆ ಅಂತ ಕ್ಲಾಸ್ ರೂಂ ನಲ್ಲೇ ಶಿಕ್ಷಕಗೆ‌ ಚಾಕುವಿನಿಂದ ತಿವಿದಿದ್ದಾನೆ…!
ಶಿಕ್ಷಕ ರವೀಂದ್ರ ಹಲ್ಲೆಗೊಳಗಾದವರು.‌ ಕಡಿಮೆ‌‌ ಅಂಕ ಪಡೆದ ವಿದ್ಯಾರ್ಥಿ ರವೀಂದ್ರ ಅವ್ರಿಗೆ ತಲೆ,‌ಕುತ್ತಿಗೆ ಸೇರಿದಂತೆ ಹತ್ತಾರು ಕಡೆ ಚಾಕು ಇರಿದಿದ್ದಾನೆ. ಇದು ಸಿಸಿಟಿವಿಯಲ್ಲಿ ದಾಖಲಾಗಿದೆ.
ಅಪರಾಧವೆಸಗಿದ ವಿದ್ಯಾರ್ಥಿ ಹಾಗೂ ಅವನಿಗೆ‌ ಚಾಕು‌ ತಂದ ಸ್ನೇಹಿತರನ್ನು‌ ಪೊಲೀಸರು ಬಂಧಿಸಿದ್ದಾರೆ..! ರವೀಂದ್ರ ಅವ್ರು ತನ್ನ ವಿದ್ಯಾರ್ಥಿ ಗೆ ಉದ್ಧಾರ ಆಗು ಅಂತ ಬೈದು‌ ಬುದ್ದಿ ಹೇಳಿದ್ದಕ್ಕೇ ‌ನೋವುಣ್ಣ ಬೇಕಾಗಿದೆ…! ಎಂಥೆಂಥಾ ವಿದ್ಯಾರ್ಥಿಗಳಿರ್ತಾರೆ..?

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article