ಒಕ್ಕಲಿಗ ಸಮುದಾಯದ ಮೀಸಲಾತಿ ಹೋರಾಟಕ್ಕೆ ಶ್ರೀಗಳ ಬೆಂಬಲ

Date:

ಒಕ್ಕಲಿಗ ಸಮುದಾಯದ ಮೀಸಲಾತಿ ಹೆಚ್ಚಳ ಬಗ್ಗೆ ಹೋರಾಟ ನಡೆಯುತ್ತಿದ್ದು, ನಿರ್ಮಲಾನಂದನಾಥ ಶ್ರೀಗಳು ಈ ಬಗ್ಗೆ ಧ್ವನಿ ಎತ್ತಿದ್ದಾರೆ. ನಾವು ಕೂಡ ಈ ಹೋರಾಟದ ಪರ ಇದ್ದೇವೆ ಎಂದು ಬಿಜೆಪಿ ಸಚಿವ ಕೆ.ಸಿ.ನಾರಾಯಣಗೌಡ ತಿಳಿಸಿದ್ರು. ಈ ಬಗ್ಗೆ ಮಂಡ್ಯದಲ್ಲಿ ಮಾತ್ನಾಡಿದ ಅವರು, ನಾವೆಲ್ಲಾ ಶ್ರೀಗಳ ಪರ ಇದ್ದೇವೆ. ನಮ್ಮ ಸಂಪೂರ್ಣ ಬೆಂಬಲ ಅವರಿಗಿದೆ. ST ಮೀಸಲಾತಿಗೆ ಎಷ್ಟೋ ವರ್ಷದಿಂದ ಹೋರಾಟ ನಡೆಯುತ್ತಿತ್ತು. ಆದ್ರೆ, ಇದನ್ನು ನಾವು ಮಾಡಿದ್ದು ಅಂತ ಬೇರೆ ಪಕ್ಷದವರು ಮೂಗು ವರೆಕೊಳ್ತಿದ್ದಾರೆ. ನಮ್ಮ ಸರ್ಕಾರ, ಸಿಎಂ, ಪ್ರಧಾನಿ, ಬಿಜೆಪಿಯಿಂದ ಮೀಸಲಾತಿ ಹೆಚ್ಚಳವಾಗಿದೆ. ನಿನ್ನೆ ಸಿದ್ದರಾಮಯ್ಯ ಮಂಡ್ಯಕ್ಕೆ ಬಂದು ಮೂಗಿನ ನೇರಕ್ಕೆ ಹೇಳಿದ್ದಾರೆ. ಅದೇ ಅವರು 5 ವರ್ಷ ಸಿಎಂ ಆಗಿದ್ದಾಗ ಯಾಕೆ ಮೀಸಲಾತಿ ಹೆಚ್ಚಳ ಮಾಡಿಲ್ಲ ಎಂದು ಪ್ರಶ್ನಿಸಿದ್ರು. ಇನ್ನ ಒಕ್ಕಲಿಗ ಸಮುದಾಯದ ಪರ ನಾವಿದ್ದು, ಸಿಎಂ ಬೊಮ್ಮಾಯಿ ಜೊತೆ ಕ್ಯಾಬಿನೆಟ್ನಲ್ಲಿ ಚರ್ಚೆಯಾಗಿದೆ. ಒಕ್ಕಲಿಗರ ಸಮುದಾಯಕ್ಕೆ ಅನ್ಯಾಯ ಆಗಲು ಬಿಡಲ್ಲ. ಕೇಂದ್ರ ಸರ್ಕಾರದ ಗಮನ ಸೆಳೆದು ಇದನ್ನ ಕಾರ್ಯಗತಗೊಳಿಸುತ್ತೇವೆ ಎಂದು ಸಚಿವ ಕೆ.ಸಿ.ನಾರಾಯಣಗೌಡ ತಿಳಿಸಿದ್ರು.

Share post:

Subscribe

spot_imgspot_img

Popular

More like this
Related

India vs Pakistan T20 matchಗೆ ಕ್ಷಣಗಣನೆ: ಕೊಲಂಬೊದಲ್ಲಿ ಹೈವೋಲ್ಟೇಜ್ ಕಾದಾಟಕ್ಕೆ ವೇದಿಕೆ ಸಿದ್ಧ

India vs Pakistan T20 matchಗೆ ಕ್ಷಣಗಣನೆ: ಕೊಲಂಬೊದಲ್ಲಿ ಹೈವೋಲ್ಟೇಜ್ ಕಾದಾಟಕ್ಕೆ...

2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ – ರಾಜ್ಯದ ಜಿಡಿಪಿ ದೇಶದಲ್ಲೇ ನಂಬರ್ ಒನ್: ಸಿಎಂ ಸಿದ್ದರಾಮಯ್ಯ

2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ – ರಾಜ್ಯದ ಜಿಡಿಪಿ...

ಬಿಕ್ಲು ಶಿವ ಹತ್ಯೆ ಪ್ರಕರಣ: ಶಾಸಕ ಬೈರತಿ ಬಸವರಾಜ್ ಕಸ್ಟಡಿಗೆ ಸಿಐಡಿ ಮನವಿ

ಬಿಕ್ಲು ಶಿವ ಹತ್ಯೆ ಪ್ರಕರಣ: ಶಾಸಕ ಬೈರತಿ ಬಸವರಾಜ್ ಕಸ್ಟಡಿಗೆ ಸಿಐಡಿ...

ಬೆಂಗಳೂರು ಸೇರಿದಂತೆ ಹಲವು ನಗರಗಳಲ್ಲಿ AQI ಏರಿಕೆ: ಮಂಗಳೂರು ‘ಅನಾರೋಗ್ಯಕರ’ ಮಟ್ಟಕ್ಕೆ

ಬೆಂಗಳೂರು ಸೇರಿದಂತೆ ಹಲವು ನಗರಗಳಲ್ಲಿ AQI ಏರಿಕೆ: ಮಂಗಳೂರು ‘ಅನಾರೋಗ್ಯಕರ’ ಮಟ್ಟಕ್ಕೆ ಬೆಂಗಳೂರು:...