ಪರಪಂಚದಾಗೆ ಏನೇನೋ ಐಯ್ತೆ ನನಗೊಂದು ಒಳ್ಳೆ ಹುಡ್ಗಿ ಬೇಕು…!

Date:

ಸಿನಿಮಾ ಬಿಡುಗಡೆಗೆ ಮುನ್ನ ಅವುಗಳ ಹಾಡುಗಳು ಸೂಪರ್ ಹಿಟ್ ಆಗಿ, ಎಲ್ಲರ ಬಾಯಲ್ಲಿ ಗುನುಗುತ್ತಿರುತ್ತವೆ.‌ ಕೆಲವೊಂದು ಹಾಡುಗಳು ಸಾರ್ವಕಾಲಿಕ ಹಿಟ್ ಆಗುತ್ತವೆ.
ಅದೇ ರೀತಿ ಬಿಡುಗಡೆ ಸಿದ್ಧವಾಗಿರುವ ಎಂಎಂಸಿಚ್ ಸಿನಿಮಾದ ಹಾಡೊಂದು ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ.‌ ಹುಡುಗರ ಇಷ್ಟದ ಹಾಡಾಗಿದೆ.
‘ಅದೃಷ್ಟಕ್ಕೊಂದು ಏಣಿ ಬೇಕು’, ಮುದ್ದಾಡಕ್ಕೊಂದು ಕೋಣೆ ಬೇಕು, ಪರಪಂಚದಾಗೆ ಏನೇನೋ ಐಯ್ತಿ ನನಗೊಂದು ಒಳ್ಳೆ ಹುಡ್ಗಿ ಬೇಕು’ ಎಂಬ ಹಾಡು ಹುಡುಗರ ಗೀತೆಯಾಗಿದೆ…! ಕೈಲಾಶ್ ಕೇರ್ ಹಾಡಿರುವ ಹಾಡು ಈಗಾಗಲೇ ಎಲ್ಲೆಡೆ ಹರಿದಾಡುತ್ತಿದೆ.

ನಟಿ ವಿನಯಾ ಪ್ರಸಾದ್ ಅವರ ಪುತ್ರಿ ಪ್ರಥಮಾ, ಪ್ರಮೀಳಾ ಜೋಷಾಯ್ ಅವರ ಪುತ್ರಿ ಮೇಘನಾ ರಾಜ್, ಸುಧಾ ಬೆಳವಾಡಿ ಅವರ ಪುತ್ರಿ ಸಂಯುಕ್ತ ಹೊರನಾಡು ಹಾಗೂ ಹಿರಿಯ ನಟಿ ಸುಮಿತ್ರಾ ಅವರ ಪುತ್ರಿ ದೀಪ್ತಿ (ನಕ್ಷತ್ರ) ನಾಯಕಿಯರಾಗಿ ನಟಿಸಿರುವ ‘ಎಂಎಂಸಿಎಚ್’ ಸಿನಿಮಾ ಶೀಘ್ರದಲ್ಲೇ ಬಿಡುಗಡೆ ಆಗಲಿದೆ.
ಮುಸ್ಸಂಜೆ ಮಹೇಶ್ ನಿರ್ದೇಶನದ ಈ ಚಿತ್ರದಲ್ಲಿ ರಾಗಿಣಿ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ.
ರಘುಭಟ್ ಮತ್ತು ಯುವರಾಜ್ ಚಿತ್ರದ ನಾಯಕರು. ಎಸ್ ಪುರುಷೋತ್ತಮ್ , ಜಾನಕಿ ರಾಮ್ ಮತ್ತು ಅರವಿಂದ್ ಚಿತ್ರಕ್ಕೆ ಬಂಡವಾಳ ಹಾಕಿದ್ದಾರೆ. ಈ ಸಿನಿಮಾದ ಹಾಡುಗಳು ರಿಲೀಸ್ ಆಗಿದ್ದು, ಸಿಕ್ಕಾಪಟ್ಟೆ ವೈರಲ್ ಆಗಿವೆ.
ಮೈಸೂರಿನ ಪ್ರತಿಷ್ಠಿತ ಕಾಲೇಜ್ ವೊಂದರಲ್ಲಿ ನಡೆದ ನೈಜ ಘಟನೆಯನ್ನು ಆಧರಿಸಿದ ಸಿನಿಮಾ ಎಂಎಂಸಿಎಚ್. ಇದೊಂದು ಮಹಿಳಾ ಪ್ರಧಾನ ಚಿತ್ರ.


ತಾನು ಓದುತ್ತಿದ್ದ ವೇಳೆಯಲ್ಲಿ ನಡೆದ ಘಟನೆಯನ್ನು ಆಧರಿಸಿ ಮುಸ್ಸಂಜೆ ಮಹೇಶ್ ಚಿತ್ರ ಮಾಡಿದ್ದಾರೆ. ಅವರು ಹೇಳುವಂತೆ ಆಗ ನಡೆದ ಘಟನೆ ಸುದ್ದಿ ಆಗಿರಲಿಲ್ಲ.‌ಪೊಲೀಸ್ ಅಧಿಕಾರಿಗಳು ಸುದ್ದಿಯಾಗದಂತೆ ನೋಡಿಕೊಂಡಿದ್ದರಂತೆ.
ಈ ವಿಷಯ ಯಾರಿಗೂ ಗೊತ್ತಿಲ್ಲವಂತೆ. ಹೇಳಬೇಕೆಂದುಕೊಂಡಿರುವುದನ್ನು ಸಿನಿಮಾ ಮೂಲಕ ಹೇಳುತ್ತಿದ್ದಾರಂತೆ. ಎಂಎಂಸಿಎಚ್ ಅಂದರೇನು ಎಂಬುದನ್ನು ತಿಳಿಯಲು ಸಿನಿಮಾ ನೋಡಬೇಕಂತೆ.
ನನಗೊಂದು ಹುಡುಗಿ ಬೇಕು ಹಾಡನ್ನು ನೀವಿನ್ನೂ ಕೇಳದೇ ಇದ್ರೆ ….ಈಗಲೇ ಕೇಳಿ…ಖಂಡಿತಾ ನಿಮ್ಗೆ ಇಷ್ಟವಾಗುತ್ತೆ…

Share post:

Subscribe

spot_imgspot_img

Popular

More like this
Related

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ ಬೆಂಗಳೂರು,...

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ ಪ್ರಾಚೀನ...