ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದು ಕಾಂಗ್ರೆಸ್ಸಿನವರೆ

0
53

ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣ ಸಂಬಂಧ ಶಾಸಕ ಎಂಪಿ ರೇಣುಕಾಚಾರ್ಯ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ವಿಧಾನಸೌಧದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದು ಬಿಜೆಪಿಯವರಲ್ಲ. ಕಾಂಗ್ರೆಸ್ಸಿಗರೇ ಮಾಡಿದ್ದಾರೆ. ಕಾಂಗ್ರೆಸ್ ಕುತಂತ್ರಿಗಳೇ ಮೊಟ್ಟೆ ಎಸೆದಿದ್ದಾರೆ. ಬಿಜೆಪಿ ಕಾರ್ಯಕರ್ತರು ಎಂದು ಹೇಳಿಕೊಂಡು ಪ್ರತಿಭಟನೆಯ ವೇಳೆ ಈ ಕೃತ್ಯವೆಸಗಿದ್ದಾರೆ ಎಂದರು. ಕಾಂಗ್ರೆಸ್ ನಲ್ಲಿಯೇ ಸಿದ್ದರಾಮಯ್ಯನವರ ವಿರೋಧಿಗಳಿದ್ದಾರೆ. ಅವರ ಪಕ್ಷದವರೇ ಮೊಟ್ಟೆ ದಾಳಿ ನಡೆಸಿದ್ದಾರೆ. ಇದು ಬಿಜೆಪಿ ಕಾರ್ಯಕರ್ತರ ಕೃತ್ಯವಾಗಲು ಸಾಧ್ಯವಿಲ್ಲ ಎಂದು ಹೇಳಿದರು.

LEAVE A REPLY

Please enter your comment!
Please enter your name here