MUDA ಹಗರಣ: ಸಿಬಿಐ ತನಿಖೆ ನಡೆಸಿ ಎಂದು ಪ್ರಧಾನಿ ಮೋದಿಗೆ ದೂರು

Date:

MUDA ಹಗರಣ: ಸಿಬಿಐ ತನಿಖೆ ನಡೆಸಿ ಎಂದು ಪ್ರಧಾನಿ ಮೋದಿಗೆ ದೂರು

ಬೆಂಗಳೂರು: ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎನ್ನುವ ಆರೋಪ ಕೇಳಿ ಬಂದಾಗಿನಿಂದ ಮುಡಾ ಹಗರಣ ರಾಜ್ಯಾದ್ಯಂತ ಭಾರೀ ಸದ್ದು ಮಾಡುತ್ತಿದೆ. ಮುಡಾ ಹಗರಣ ವಿಚಾರವಾಗಿ ಎಸ್‌ಐಟಿ, ಲೋಕಾಯುಕ್ತ ಹಾಗೂ ಇಡಿ ಅಧಿಕಾರಿಗಳು ಬೆಂಬಿಡದೇ ತನಿಖೆ ನಡೆಸುತ್ತಿದ್ದಾರೆ. ತನಿಖೆ ಆರಂಭವಾದಾಗಿನಿಂದ ಮುಡಾದಲ್ಲಿನ ಹಲವಾರು ಕರ್ಮಕಾಂಡಗಳು ಬಯಲಾಗುತ್ತಲೇ ಇವೆ.. ಇದೀಗ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಗೆ 296 ಪುಟಗಳ ದೂರು ಸಲ್ಲಿಕೆಯಾಗಿದೆ.
100 ಕೋಟಿಗೂ ಅಧಿಕ ನಷ್ಟ ಆಗಿದೆ, CBI ತನಿಖೆ ನಡೆಸಿ ಎಂದು ವಕೀಲ ರವಿಕುಮಾರ್ ಎಂಬುವವರು ಪ್ರಧಾನಿ ಮೋದಿಗೆ ದೂರು ಸಲ್ಲಿಸಿದ್ದಾರೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಒಂದರ ಮೇಲೊಂದು ಅಕ್ರಮಗಳು ಬಯಲಾಗುತ್ತಲೇ ಇವೆ. ಒಂದು ಕೋಟಿ ರೂಪಾಯಿಗೂ ಅಧಿಕ ಮೌಲ್ಯದ 23 ಸೈಟ್ ಗಳನ್ನು ಕೇವಲ 3 ಸಾವಿರ ರೂಪಾಯಿಗಳಿಗೆ ಮಾರಾಟ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಇದರಿಂದಾಗಿ ಸರ್ಕಾರಕ್ಕೆ 300 ಕೋಟಿ ರೂಪಾಯಿಗೂ ಅಧಿಕ ನಷ್ಟವಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಜಿ.ಟಿ.ದಿನೇಶ್‌ಕುಮಾರ್, ವಿಶೇಷ ತಹಶೀಲ್ದಾರ್ ಶಿವಕುಮಾರ್, ಹೆಚ್ಚುವರಿ ಜಿಲ್ಲಾ ನೋಂದಣಾಧಿಕಾರಿ ಶ್ರೀಮತಿ.ಕಾವ್ಯ, ರಿಯಲ್ ಎಸ್ಟೇಟ್ ಉದ್ಯಮಿ ಎನ್.ಮಂಜುನಾಥ್ ವಿರುದ್ಧ ದೂರು ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.

Share post:

Subscribe

spot_imgspot_img

Popular

More like this
Related

ರಾಯಚೂರು: ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ಆತ್ಮಹತ್ಯೆ!

ರಾಯಚೂರು: ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ಆತ್ಮಹತ್ಯೆ! ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ...

ಹಣಕಾಸು ವಿಚಾರಕ್ಕೆ ಯುವಕನ ಬರ್ಬರ ಹತ್ಯೆ! ಸಾಕ್ಷ್ಯವೇ ಸಿಗದಂತೆ ಶವ ಸುಟ್ಟು ಹಾಕಿದ ದುಷ್ಕರ್ಮಿಗಳು

ಹಣಕಾಸು ವಿಚಾರಕ್ಕೆ ಯುವಕನ ಬರ್ಬರ ಹತ್ಯೆ! ಸಾಕ್ಷ್ಯವೇ ಸಿಗದಂತೆ ಶವ ಸುಟ್ಟು...

ಇರಾನ್ ದಾಳಿ ಶಂಕೆ: ಅಮೆರಿಕದ F-35 ಯುದ್ಧವಿಮಾನ ತುರ್ತು ಲ್ಯಾಂಡಿಂಗ್

ಇರಾನ್ ದಾಳಿ ಶಂಕೆ: ಅಮೆರಿಕದ F-35 ಯುದ್ಧವಿಮಾನ ತುರ್ತು ಲ್ಯಾಂಡಿಂಗ್ ಟೆಹ್ರಾನ್: ಇರಾನ್...

ಯುಗಾದಿ ಹೊಸತೊಡಕು ಜೋರು: ಮಾಂಸದಂಗಡಿ ಮುಂದೆ ಕ್ಯೂ ನಿಂತ ಜನರು!

ಯುಗಾದಿ ಹೊಸತೊಡಕು ಜೋರು: ಮಾಂಸದಂಗಡಿ ಮುಂದೆ ಕ್ಯೂ ನಿಂತ ಜನರು! ಬೆಂಗಳೂರು: ಯುಗಾದಿ...