No menu items!
9.5 C
Munich
Wednesday, May 6, 2026

ಮುಡಾ ಕೇಸ್; ಇಂದು ಹೈಕೋರ್ಟ್‌ʼನಲ್ಲಿ ಸಿದ್ದರಾಮಯ್ಯ ಅರ್ಜಿ ವಿಚಾರಣೆ

Must read

ಮುಡಾ ಕೇಸ್; ಇಂದು ಹೈಕೋರ್ಟ್‌ʼನಲ್ಲಿ ಸಿದ್ದರಾಮಯ್ಯ ಅರ್ಜಿ ವಿಚಾರಣೆ

ಬೆಂಗಳೂರು: ಮುಡಾ ಕೇಸಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರೋ ರಿಟ್ ಅರ್ಜಿ ವಿಚಾರಣೆ ಇಂದು ಹೈಕೋರ್ಟ್‌ನಲ್ಲಿ ನಡೆಯಲಿದೆ.. ಇಂದು ಮಧ್ಯಾಹ್ನ 3.30ಕ್ಕೆ ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ಮುಡಾ ಕೇಸ್ ಅರ್ಜಿ ವಿಚಾರಣೆ ನಡೆಯಲಿದೆ. ಸರ್ಕಾರದ ಪರ ಅಡ್ವೊಕೆಟ್ ಜನರಲ್ ಶಶಿಕಿರಣ್ ಶೆಟ್ಟಿ ವಾದ ಮಂಡಿಸಿಲಿದ್ದಾರೆ. ನಾಲ್ಕು ದಿನ ಈ ಅರ್ಜಿಯ ವಿಚಾರಣೆ ನಡೆದಿದ್ದು,
ಬಹುತೇಕ ಅಂತ್ಯವಾಗಿದೆ. ಸಿಎಂ ಪರ ವಕೀಲರಾದ ಅಭಿಷೇಕ್ ಮನು ಸಿಂಘ್ವಿ, ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗಳ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದ್ದಾರೆ. ದೂರುದಾರರ ಪರ ವಕೀಲರು ವಾದ ಅಂತ್ಯಗೊಳಿಸಿದ್ದಾರೆ. ಇದೀಗ ಇಂದು ಮತ್ತೆ ಹೈಕೋರ್ಟ್‌ನಲ್ಲಿ ವಿಚಾರಣೆಗೆ ಬರುತ್ತಿದ್ದು, ಸಿಎಂ ಆತಂಕ ಹೆಚ್ಚಿಸಿದೆ.

- Advertisement -spot_img

More articles

- Advertisement -spot_img

Latest article