ಮನೆ ಖಾಲಿ ಮಾಡದ್ದಕ್ಕೇ ಯುವಕನ ಕೊಲೆ….!

Date:

ಮನೆ ಖಾಲಿ ಮಾಡದ ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.
25ವರ್ಷದ ಶಿವಕುಮಾರ್ ಎಂಬ ಯುವಕ ಮೃತ ದುರ್ದೈವಿ.


ನಿನ್ನೆ (ಭಾನುವಾರ) ರಾತ್ರಿ ಶಿವಕುಮಾರ್ ತನ್ನ ಸ್ನೇಹಿತ ಪ್ರಭಾಕರ್ ಎಂಬುವವರ ಜೊತೆ ಗಣೇಶ ನಗರದ ಬಳಿ ಹೋಗುತ್ತಿರುವಾಗ ಮನೆಯ ಮಾಲೀಕ ಅವಿನಾಶ್ ಇಬ್ಬರ ಮೇಲೂ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ. ಘಟನೆಯಲ್ಲಿ ಶಿವಕುಮಾರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಗಾಯಗೊಂಡಿರುವ ಪ್ರಭಾಕರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


ಎರಡು ತಿಂಗಳಿಂದ ಮನೆ ಖಾಲಿ ಮಾಡಲು ಶಿವಕುಮಾರ್ ಗೆ ಹೇಳುತ್ತಿದ್ದರೂ ಖಾಲಿ ಮಾಡಿರಲಿಲ್ಲವಂತೆ. ಇದರಿಂದ ಸಿಟ್ಟಿಗೆದ್ದ ಅವಿನಾಶ್ ಕೊಲೆಗೆ ಮುಂದಾಗಿದ್ದಾನೆ ಎನ್ನಲಾಗಿದೆ. ಆರೋಪಿ ಪರಾರಿಯಾಗಿದ್ದಾನೆ.

Share post:

Subscribe

spot_imgspot_img

Popular

More like this
Related

Bangalore: ಬಾರ್‌ʼನಲ್ಲಿ ಕುಡಿಯಲು ಹೋದ ವ್ಯಕ್ತಿ ನಿಗೂಢ ಸಾವು!

Bangalore: ಬಾರ್‌ʼನಲ್ಲಿ ಕುಡಿಯಲು ಹೋದ ವ್ಯಕ್ತಿ ನಿಗೂಢ ಸಾವು! ಬೆಂಗಳೂರು: ಬಾರ್‌ಗೆ ಕುಡಿಯಲು...

ಬೆಂಗಳೂರು ಸೇರಿ 13 ಜಿಲ್ಲೆಗಳಲ್ಲಿ ಧಾರಾಕಾರ ಮಳೆ: ಹವಾಮಾನ ಇಲಾಖೆ 

ಬೆಂಗಳೂರು ಸೇರಿ 13 ಜಿಲ್ಲೆಗಳಲ್ಲಿ ಧಾರಾಕಾರ ಮಳೆ: ಹವಾಮಾನ ಇಲಾಖೆ  ಬೆಂಗಳೂರು: ರಾಜ್ಯದ...

ಹೃದಯ ಸಮಸ್ಯೆ ಇದ್ದವರಿಗೆ ದಾಳಿಂಬೆ ಬೆಸ್ಟ್ ಅಂತೆ; ನೀವು ಕೂಡ ತಪ್ಪದೇ ಸೇವಿಸಿ

ಹೃದಯ ಸಮಸ್ಯೆ ಇದ್ದವರಿಗೆ ದಾಳಿಂಬೆ ಬೆಸ್ಟ್ ಅಂತೆ; ನೀವು ಕೂಡ ತಪ್ಪದೇ...

ಮಹಿಳೆಯರಿಗೆ ಗುಡ್‌ ನ್ಯೂಸ್: ವೇತನ ಸಹಿತ ಮುಟ್ಟಿನ ರಜೆಗೆ ಅನುಮೋದನೆ‌

ಮಹಿಳೆಯರಿಗೆ ಗುಡ್‌ ನ್ಯೂಸ್: ವೇತನ ಸಹಿತ ಮುಟ್ಟಿನ ರಜೆಗೆ ಅನುಮೋದನೆ‌ ಬೆಂಗಳೂರು: ಗ್ಯಾರಂಟಿ...