ಡಿಜೆ ಸಾಂಗಿಗಾಗಿ ಯುವಕನ ಹೆಣ ಬಿತ್ತು…! ಕೊಲೆಯಲ್ಲಿ ಅಂತ್ಯವಾಯ್ತು ಸ್ನೇಹಿತ‌ನ ಹುಟ್ಟುಹಬ್ಬದ ಆಚರಣೆ…!

Date:

ಸ್ನೇಹಿತನ ಹುಟ್ಟುಹಬ್ಬದಂದು ಡಿಜೆ ಸಾಂಗಿಗಾಗಿ ಶುರುವಾದ ಜಗಳ ಯುವಕನ ಕೊಲೆಯಲ್ಲಿ ಅಂತ್ಯವಾದ ಘಟನೆ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆದಿದೆ.


ಪಶ್ಚಿಮ ದೆಹಲಿಯ ಪಂಜಾಬಿ ಬಾಗ್ ನಲ್ಲಿ ಭಾನುವಾರ ರಾತ್ರಿ ಈ ಘಟನೆ ನಡೆದಿದ್ದು , ವಿಜಯ್ ದೀಪ್ ಮೃತ ದುರ್ದೈವಿ.
ಇಶ್ಮಿತ್ ಎಂಬಾತ ಬಾರೊಂದರಲ್ಲಿ ತನ್ನ 10 ಮಂದಿ ಗೆಳೆಯರ ಜೊತೆ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದನು. ಇವರುಗಳಲ್ಲಿ ಒಬ್ಬನಾದ ವಿಜಯ್ ದೀಪ್ ಡಿಜೆ ದೀಪಕ್ ಬಿಶ್ತ್ ಬಳಿ ಹೋಗಿ ಹಾಡನ್ನು ಬದಲಿಸುವಂತೆ ಹೇಳಿದ್ದಾನೆ‌‌. ಆಸರೆ ಬಿಶ್ತ್ ಹಾಡು ಬದಲಿಸಲು ನಿರಾಕರಿಸಿದ್ದಾನೆ. ಈ ಸಂದರ್ಭದಲ್ಲಿ ಇಬ್ಬರ ನಡುವೆ ಜಗಳವಾಗಿದೆ. ಜಗಳ ವೀಕೋಪಕ್ಕೆ ಹೋಗಿದೆ. ಇಶ್ಮಿತ್ ಮತ್ತವನ ಸ್ನೇಹಿತರು ಡಿಜೆ ಮತ್ತು ಇತರೆ ಸಿಬ್ಬಂದಿ ನಡುವೆ ಗಲಾಟೆ ನಡೆದಿದೆ.


ಡಿಜೆ ಚಾಕು ತೆಗೆದು ವಿಜಯ್ ದೀಪ್ ಗೆ ಇರಿದಿದ್ದಾನೆ. ಪರಿಣಾಮ ವಿಜಯ್ ದೀಪ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಪಬ್‌ ನಲ್ಲಿದ್ದ ಯುವತಿಯೊಬ್ಬಳಿಗೆ ತಲೆಗೆ ಪೆಟ್ಟಾಗಿದೆ. ಆಕೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಡಿಜೆ ಪೊಲೀಸರ ಅತಿಥಿಯಾಗಿದ್ದಾನೆ.

Share post:

Subscribe

spot_imgspot_img

Popular

More like this
Related

ಗುರು ರಾಘವೇಂದ್ರ ಸ್ವಾಮಿಗಳ ಆಲ್ಬಮ್ ಸಾಂಗ್ ” ರಾಯರ ದರ್ಶನ ” ದ ಟೀಸರ್ ಬಿಡುಗಡೆ

ಲಕ್ಷ್ಮೀ ಗಣೇಶ ಪ್ರೋಡಕ್ಷನ್ ಮತ್ತು ದಿ ನ್ಯೂ ಇಂಡಿಯನ್ ಟೈಮ್ಸ್ ಸಂಸ್ಥೆ...

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ ಧಾರವಾಡ:...

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು!

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು! ದಾವಣಗೆರೆ: ಜಿಲ್ಲೆಯ ಜಗಳೂರು ತಾಲೂಕಿನ ಗೋಗುದ್ದು...