No menu items!
19.1 C
Munich
Monday, May 4, 2026

ಮುಸಲ್ಮಾನರ ಸಲೂನ್ ಬಂದ್ ಮಾಡಿಸಬೇಕು

Must read

ಬೆಂಗಳೂರು : ಮುಸಲ್ಮಾನರ ಸಲೂನ್ ಬಂದ್ ಮಾಡಿಸಬೇಕು ಎಂಬ ಶ್ರೀರಾಮ ಸೇನೆಯ ಪ್ರಮೋದ್ ಮುತಾಲಿಕ್ ಅವರ ಹೇಳಿಕೆ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಸದಾಶಿವ ನಗರದಲ್ಲಿ ಮಾತನಾಡಿದ ಅವರು, ನಾನು ಪ್ರಮೋದ್ ಮುತಾಲಿಕ್ ಅವರಿಗೆ ಉತ್ತರ ನೀಡುವುದಿಲ್ಲ. ರಾಜ್ಯದಲ್ಲಿ ಸಂವಿಧಾನ ಬದ್ಧವಾಗಿ ಎಲ್ಲರಿಗೂ ರಕ್ಷಣೆ ನೀಡುತ್ತೇವೆ ಎಂದು ಪ್ರಮಾಣ ಮಾಡಿರುವ ಮುಖ್ಯಮಂತ್ರಿಗಳು, ಸಚಿವರು ಈ ಬಗ್ಗೆ ಉತ್ತರ ನೀಡಬೇಕು. ಈ ಎಲ್ಲವನ್ನು ಬಿಜೆಪಿ ಹಾಗೂ ಬಿಜೆಪಿ ಸರ್ಕಾರವೇ ಹೇಳಿಸುತ್ತಿದೆ. ಹಳೇ ಮೈಸೂರು ಸೇರಿದಂತೆ ಅನೇಕ ಭಾಗಗಳಲ್ಲಿ ಅವರು ಈ ರೀತಿ ಪ್ರಚೋದಿಸುತ್ತಿದ್ದಾರೆ. ಇದೆಲ್ಲದರ ಬಗ್ಗೆ ನಾನು ಈಗ ಮಾತನಾಡುವುದಿಲ್ಲ. ಆಮೇಲೆ ಮಾತಾಡುತ್ತೇನೆ. ಈ ವಿಚಾರವಾಗಿ ಮೊದಲು ಮುಖ್ಯಮಂತ್ರಿಗಳು ಉತ್ತರಿಸಲಿ’ ಎಂದು ಡಿಕೆಶಿ ಹೇಳಿದ್ದಾರೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article