ನಾವು ಶಶಿಕಲಾ ಜೊಲ್ಲೆಗೆ ಹುಟ್ಟಿದವರಲ್ಲ …..!

0
38

ನಾವು ಶಶಿಕಲಾ ಜೊಲ್ಲೆಗೆ ಹುಟ್ಟಿದವರಲ್ಲ ಎಂಬ ಕಾಂಗ್ರೆಸ್ ಯುವ ಮುಖಂಡ ಮೊಹಮ್ಮದ್ ಹ್ಯಾರಿಸ್ ನಲಪಾಡ್ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಫೇಸ್ ಬುಕ್ ಲೈವ್ ನಲ್ಲಿಸಿದ್ದರಾಮಯ್ಯ ಅವರತ್ತ ಕೊಡಗಿನಲ್ಲಿ ಬಿಜೆಪಿ ಕಾರ್ಯಕರ್ತರು ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ನಲಪಾಡ್, ಬಿಜೆಪಿಯವರು ಊರುಬಿಟ್ಟು ಓಡಿಹೋಗುವಂತೆ ಮಾಡುತ್ತೇವೆ. ರಾಜ್ಯದ ಎಲ್ಲೆಡೆ ಪ್ರತಿಭಟನೆ ಮಾಡುತ್ತೇವಾ. ಎಲ್ಲಾ ಸಚಿವರಿಗೂ ಮೊಟ್ಟೆ ಕಳುಹಿಸಿ ಕೊಡುತ್ತೇವೆ. ನಾವು ಗಾಂಧೀಜಿ ಅವರ ಅಹಿಂಸಾ ತತ್ವದಿಂದ ಸೋಲಿಸುತ್ತೇವೆ ಎಂದು ಕಿಡಿ ಕಾರಿದ್ದಾರೆ. ಮೊಟ್ಟೆ ಎಸೆದರೆ ನಾವು, ಸಿದ್ದರಾಮಯ್ಯ ಹೆದರುವುದಿಲ್ಲ,ನಮ್ಮ ಹೋರಾಟ ಉಗ್ರ ಆಗುವ ಮುನ್ನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಕ್ಷಮಾಪಣೆ ಕೇಳಬೇಕು ಎಂದಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಜೊಲ್ಲೆ ವಿರುದ್ಧ ಮೊಟ್ಟೆ ಖರೀದಿಯಲ್ಲಿ ಕಿಕ್‌ಬ್ಯಾಕ್ ಪಡೆದ ಆರೋಪ ಕೇಳಿಬಂದಿತ್ತು, ರಾಜೀನಾಮೆ ನೀಡಬೇಕೆಂದು ಕಾಂಗ್ರೆಸ್ ಸೇರಿದಂತೆ ಹಲವು ಸಂಘಟನೆಗಳು ಆಗ್ರಹಿಸಿದ್ದವು.

LEAVE A REPLY

Please enter your comment!
Please enter your name here