No menu items!
9.3 C
Munich
Wednesday, April 29, 2026

ನಶ್ವರ

Must read

ನಶ್ವರ

ಸರದಿಯಲಿ ಬಂದವನು
ಬಲುಬೇಗ ನಿಂತವನು
ಕಾಲುಸೋತವರ ಕಾಲೆಳೆದವನು
ಕರುಣೆ ಇಲ್ಲದ ಎದೆಯೊಳಗೆ
ಕರುಣಾನಟನಾದವನು
ಬೆತ್ತಲೆಯಲೂ ಹಸಿಸುಳ್ಳ ನುಡಿದವನು
ಹುಸಿ ನುಡಿಯ ಮಸಿ ಹಿಡಿದು
ತಿಳಿದಂತೆ ಬರೆದವನು
ಸರಸದಲೂ ವಿಷತಲೆಯ
ವಿಷಯವ ಬಿತ್ತುವನು
ಕಾರ್ಕೋಟಕ‌ವ ಮುದ್ದಾಡಿ ಎದೆಗಪ್ಪಿಸಿಕೊಂಡವನು
ಕಣ್ಣೀರ ಕಡಲಲ್ಲೂ ಹಗೆಯ
ಹೊಗೆಯಲಿ ಕೈಯ ಹಿಸುಕಿದವನ
ಕಂಡ ಕಾವ್ಯದತ್ತನ
ಮನವಿಂದು ನಗುತಿಹುದು
ಕಾಲ ಚಕ್ರದ ಸುಳಿಗೆ ಸಿಕ್ಕ
ಮೂಳೆಮಾಂಸವೇ ಮಣ್ಣಾಗಿಹುದೆಂದು
ನುಡಿದಿಹನು.

?ದತ್ತರಾಜ್ ಪಡುಕೋಣೆ?

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article