500, 1000 ನೋಟ್ ರದ್ದು ಷೇರು ಮಾರುಕಟ್ಟೆ ಕುಸಿತ, ಚಿನ್ನದ ಬೆಲೆ ಗಗನಕ್ಕೆ..!

Date:

ಕಪ್ಪುಹಣ, ಖೋಟಾನೋಟು ಮತ್ತು ಭ್ರಷ್ಟಾಚಾರ ತಡಡೆಗಟ್ಟುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಮಂಗಳವಾರ ರಾತ್ರಿಯಿಂದಲೇ ದಿಢೀರನೆ 500, 1000 ನೋಟು ನಿಷೇಧ ಹೇರಿದ ಬೆನ್ನಲ್ಲೇ ಷೇರು ಮಾರುಕಟ್ಟೆ, ರಿಯಲ್ ಎಸ್ಟೇಟ್ ಸೇರಿದಂತೆ ಇತರೆ ವಾಣಿಜ್ಯ ವಹಿವಾಟುಗಳು ಸಂಪೂರ್ಣ ಕುಸಿತ ಕಂಡಿದೆ..! ದೇಶಾದ್ಯಂತ ನೋಟುಗಳ ನಿಷೇಧದ ಬೆನ್ನಲ್ಲೇ ಈ ಎಲ್ಲಾ ವಿಧ್ಯಾಮಾನಗಳು ಸಂಭವಿಸಿದೆ..
ಇನ್ನು ಇಂದು ಮುಂಜಾನೆ 9:30ರ ಸುಮಾರಿಗೆ ಮುಂಬೈ ಷೇರು ಸೂಚ್ಯಂಕ 704 ಅಂಕಗಳಷ್ಟು ಕುಸಿತ ಕಂಡು ಬಂದು 25 ಸಾವಿರದ 885ರಲ್ಲಿ ವಹಿವಾಟು ನಡೆಸುತ್ತಿತ್ತು. ನಿಫ್ಟಿ ಸಹ 231 ಅಂಕ ಕುಸಿತ ಕಂಡು ಬಂದಿದ್ದು 8 ಸಾವಿರದ 312ರಲ್ಲಿ ವಹಿವಾಟು ನಡೆಸುತ್ತಿತ್ತು. ಇನ್ನು ರಿಯಲ್ ಎಸ್ಟೇಟ್‍ಗಳಲ್ಲಿ ಬಂಡವಾಳ ಹೂಡಿದವರಿಗೆ ನೋಟು ನಿಷೇಧದಿಂದಾಗಿ ಅಪಾರ ನಷ್ಟ ಸಾಧ್ಯತೆಯೂ ಇದೆ.. ಅಲ್ಲದೇ ನಿನ್ನೆ ರಾತ್ರಿಯಿಂಲೇ ಚಿನ್ನದ ಬೆಲೆ ಗಗನಕ್ಕೇರಿದೆ. ಮುಂಬೈ ಷೇರು ಮಾರುಕಟ್ಟೆ ವಹಿವಾಟು ಆರಂಭವಾಗುತ್ತಿದ್ದಂತೆ ಆಟೋಮೊಬೈಲ್, ಗ್ರಾಹಕ ಬಳಕೆ ವಸ್ತುಗಳು ಬ್ಯಾಂಕ್ ಷೇರುಗಳಲ್ಲಿ ಭಾರಿ ಪ್ರಮಾಣದ ಇಳಿಕೆ ಕಂಡು ಬಂದಿದೆ. ಇನ್ನು ಕೇಂದ್ರ ಸರ್ಕಾರ 500, 1000 ನೋಟು ನಿಷೇಧದ ಕಟ್ಟು ನಿಟ್ಟಿನ ಜಾರಿಯಿಂದಾಗಿ ಯಾವೊಬ್ಬ ವ್ಯಾಪಾರಿಗಳು ಗ್ರಾಹಕರ ಬಳಿ ನೋಟು ಕೊಂಡು ಕೊಳ್ಳಲು ಹಿಂದೇಟು ಹಾಕುತ್ತಿರುವ ಪರಿಣಾಮವಾಗಿ ಜನಸಾಮಾನ್ಯರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಿದ್ದರೂ ಕೂಡ ಕೇಂದ್ರ ಸರ್ಕಾರದ ಈ ನಡೆಯನ್ನು ಶ್ಲಾಘನೆ ವ್ಯಕ್ತ ಪಡಿಸಿರೋದು ನೋಡಬಹುದು..

Like us on Facebook  The New India Times

POPULAR  STORIES :

ಮನಸ್ಸಿಗೆ ಬಂದ ಫೇಸ್‍ಬುಕ್ ಗೆಳತಿ ಮನೆ ಬೆಳಗುವಳಾ.? | ರಿಯಲ್ ಸ್ಟೋರಿ

ತಮ್ಮ ಗುರುವಿಗಾಗಿ ಸ್ಟಂಟ್ ಮಾಡಲು ಒಪ್ಪಿಕೊಂಡಿದ್ರು: ರವಿವರ್ಮ

ಮಾಸ್ತಿಗುಡಿ ದುರಂತ: ಐವರ ವಿರುದ್ದ ಜಾಮೀನು ರಹಿತ ವಾರೆಂಟ್ ಜಾರಿ..!

12 ವರ್ಷದ ಅಪ್ರಾಪ್ತ ಬಾಲಕನಿಂದ 18 ವರ್ಷದ ಯುವತಿ ತಾಯಿಯಾದ್ಲು..!

ವಿಲನ್ ಸಿನಿಮಾದ ಮತ್ತೊಂದು ಸ್ಪೆಷಾಲಿಟಿ ಏನ್ ಗೊತ್ತಾ..?

ಹಾಂಕಾಂಗ್ ಸ್ವಾತಂತ್ರ್ಯವನ್ನು ನಿರ್ಭಂಧಿಸುವ ಮಸೂದೆ ಅಂಗೀಕರಿಸಿದ ಚೀನಾ

ಇಂಡಿಯನ್ ಸ್ಟೀಲ್ ಮ್ಯಾನ್ ಸಾಹಸ ನೋಡುದ್ರೆ ಬೆಚ್ಚಿ ಬೀಳ್ತೀರ..!

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...