ಇನ್ಮುಂದೆ ಬಿಗ್ ಬಜಾರ್‍ನಲ್ಲೂ ಮನಿ ವಿತ್‍ಡ್ರಾ ಮಾಡ್ಕೊಳ್ಳಿ..!

Date:

500 ಮತ್ತು 1000 ಮುಖಬೆಲೆಯ ನೋಟುಗಳ ನಿಷೇಧದ ನಂತರ ಜನ ಸಾಮಾನ್ಯರಿಗೆ ತೊಂದರೆಯಾಗಬಾರದು ಎಂಬ ಕಾರಣಕ್ಕಾಗಿ ಬ್ಯಾಂಕ್ ಮತ್ತು ಎಟಿಎಂಗಳಲ್ಲದೇ ದೇಶದ ಸುಮಾರು 2500 ಪೆಟ್ರೋಲ್ ಬಂಕ್‍ಗಳಲ್ಲೂ ಹಣ ಡ್ರಾ ಮಾಡಿಕೊಳ್ಳಬಹುದು ಎಂದು ಕೇಂದ್ರ ಸರ್ಕಾರ ತಿಳಿಸಿತ್ತು. ಆದರೆ ಈಗ ಮತ್ತೊಂದು ಪರ್ಯಾಯ ಮಾರ್ಗವನ್ನು ಕಂಡುಕೊಂಡಿದ್ದಾರೆ.. ಅದೆನಪ್ಪಾ ಅಂದ್ರೆ ಇನ್ಮುಂದೆ ಬಿಗ್ ಬಜಾರ್‍ನಲ್ಲೂ ಹಣ ವಿತ್ ಡ್ರಾ ಮಾಡಿಕೊಳ್ಬೋದು. ಹಣದ ಅಗತ್ಯವಿದ್ದರೆ ಬಿಗ್ ಬಜಾರ್ ಮಳಿಗೆಗೆ ತೆರಳಿ ನಿಮ್ಮ ಕಾರ್ಡ್ ಸ್ವೈಪ್ ಮಾಡಿದ್ರೆ ನಿಮಗೆ 2000 ಹಣ ಸಿಗುತ್ತೆ ನೋಡಿ..
ಎಟಿಎಂ ಮತ್ತು ಬ್ಯಾಂಕ್‍ಗಳಲ್ಲಿ ಹೆಚ್ಚುತ್ತಿರುವ ಕ್ಯೂನಿಂದ ಪರ್ಯಾಯ ಮಾರ್ಗ ಕಂಡುಕೊಂಡ ಕೇಂದ್ರ ಸರ್ಕಾರ ಬಂಕ್‍ಗಳಲ್ಲಿ ಹಣ ಬದಲಾವಣೆ ಮಾಡಿಕೊಳ್ಳುವ ಕಾರ್ಯ ಕೈಗೊಂಡಿತ್ತು. ಆದರೆ ಈಗ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬಿಗ್ ಬಜಾರ್‍ಗಳೊಂದಿಗೆ ಟೈಯಪ್ ಮಾಡಿಕೊಂಡು ದೇಶದ ಸುಮಾರು 258 ಬಿಗ್‍ಬಜಾರ್ ಮಳಿಗೆಗಳಲ್ಲಿ ಜನರಿಗೆ ಹಣ ಡ್ರಾ ಮಾಡಿಕೊಡಲು ಅವಕಾಶ ಮಾಡಿಕೊಟ್ಟಿದೆ. ಈ ಕಾರ್ಯ ಬುಧವಾರದಿಂದಲೇ ಕಾರ್ಯರಂಭಗೊಳ್ಳಲಿದ್ದು, ನಿಮ್ಮ ಡೆಬಿಟ್ ಅಥವಾ ಎಟಿಎಂ ಕಾರ್ಡ್ ಸ್ವೈಪ್ ಮಾಡಿಕೊಳ್ಳುವುದರ ಮೂಲಕ ಹಣ ಪಡೆಯಬಹುದು ಎಂದು ಬಿಗ್ ಬಜಾರ್ ಸಿಇಒ ಕಿಶೋರ್ ಬಿಯಾನಿ ಟ್ವಿಟರ್ ಮೂಲಕ ತಿಳಿಸಿದ್ದಾರೆ.

Like us on Facebook  The New India Times

POPULAR  STORIES :

ಅವನಿಗೆ ಅವಳು ಇಷ್ಟವಾಗಿದ್ದು ಪ್ರತಿಭಟನೆಯಲ್ಲಿ. ಅವಳು ಇವನ ಮುಖ ನೋಡಿದ್ದು ಸೆರಗು ಸಿಕ್ಕಿಬಿದ್ದಾಗ.!

50 ಲಕ್ಷ ಮಂದಿಗೆ ಸ್ಮಾರ್ಟ್ ಫೋನ್ & 1 ವರ್ಷ ಡೇಟಾ ಉಚಿತ

ರೈಲ್ವೇ ಆಫರ್: ಇನ್ಮುಂದೆ ಆನ್‍ಲೈನ್ ಬುಕಿಂಗ್‍ಗೆ ಹೆಚ್ಚುವರಿ ಶುಲ್ಕ ಇಲ್ಲ..!

ಕ್ಯೂನಲ್ಲಿ ನಿಂತಿದ್ದ ಜನರಿಗೆ ಹಿಗ್ಗಾ ಮುಗ್ಗಾ ಥಳಿಸಿದ ಪೊಲೀಸ್..!

ವಾಟ್ಸಾಪ್‍ನಿಂದ 10 ವರ್ಷದ ಲವ್ ಬ್ರೇಕಪ್..!

ಬಿಗ್‍ಬಾಸ್ ಸದಸ್ಯರ ಬಗ್ಗೆ ಜನ ಏನ್ ಹೇಳ್ತಾರೆ…?

Share post:

Subscribe

spot_imgspot_img

Popular

More like this
Related

ಮೊಬೈಲ್ ನೋಡುತ್ತಾ ಊಟ ಮಾಡ್ತೀರಾ? ಹಾಗಿದ್ರೆ ಈ ಸ್ಟೋರಿ ನೋಡಿ

ಮೊಬೈಲ್ ನೋಡುತ್ತಾ ಊಟ ಮಾಡ್ತೀರಾ? ಹಾಗಿದ್ರೆ ಈ ಸ್ಟೋರಿ ನೋಡಿ ಇಂದಿನ ಜೀವನಶೈಲಿಯಲ್ಲಿ...

Ali Khamenei ನಿಧನ: ಇರಾನ್‌ನಲ್ಲಿ 40 ದಿನಗಳ ಶೋಕಾಚರಣೆ ಘೋಷಣೆ

Ali Khamenei ನಿಧನ: ಇರಾನ್‌ನಲ್ಲಿ 40 ದಿನಗಳ ಶೋಕಾಚರಣೆ ಘೋಷಣೆ ತೆಹ್ರಾನ್: ಇರಾನ್‌ನ...

ರಣಜಿ ಟ್ರೋಫಿ ಫೈನಲ್: ಕರ್ನಾಟಕಕ್ಕೆ ತವರಿನಲ್ಲಿ ಸೋಲು, ಜಮ್ಮು-ಕಾಶ್ಮೀರ ಚೊಚ್ಚಲ ಚಾಂಪಿಯನ್

ರಣಜಿ ಟ್ರೋಫಿ ಫೈನಲ್: ಕರ್ನಾಟಕಕ್ಕೆ ತವರಿನಲ್ಲಿ ಸೋಲು, ಜಮ್ಮು-ಕಾಶ್ಮೀರ ಚೊಚ್ಚಲ ಚಾಂಪಿಯನ್ ಧಾರವಾಡ:...

ಹಣೆಬರಹದಲ್ಲಿ ಇದ್ದರೆ ಅಣ್ಣ ಸಿಎಂ ಆಗುತ್ತಾರೆ: ಮಾಜಿ ಸಂಸದ ಡಿ.ಕೆ. ಸುರೇಶ್ ಹೇಳಿಕೆ

ಹಣೆಬರಹದಲ್ಲಿ ಇದ್ದರೆ ಅಣ್ಣ ಸಿಎಂ ಆಗುತ್ತಾರೆ: ಮಾಜಿ ಸಂಸದ ಡಿ.ಕೆ. ಸುರೇಶ್...