ರಾಧೆ ಮಾಗೆ ತನ್ನ ಕುರ್ಚಿಯನ್ನೇ ಬಿಟ್ಟುಕೊಟ್ಟ ಪೊಲೀಸ್..!

Date:

ನವದೆಹಲಿ : ಇತ್ತೀಚೆಗೆ ಜನ ದೇವ್ರನ್ನು ನಂಬುವುದಕ್ಕಿಂತ ಹೆಚ್ಚಾಗಿ ಸ್ವಯಂಘೋಷಿತ ದೇವಮಾನವರನ್ನು ನಂಬುವುದು ಹೆಚ್ಚಾಗ್ತಾ ಇದೆ. ಅವಿದ್ಯಾವಂತರಿಗಿಂತ ವಿದ್ಯಾವಂತರೇ ಇಂತಹ ಸ್ವಯಂಘೋಷಿತ ದೇವಮಾನವರಿಗೆ ಮಣೆ ಹಾಕುವುದು ನಿಜಕ್ಕೂ ವಿಪರ್ಯಾಸ.
ದೆಹಲಿ ಪೊಲೀಸ್ ಠಾಣೆಯೊಂದರಲ್ಲಿ ಸ್ವಯಂ ಘೋಷಿತ ದೇವಮಹಿಳೆ ರಾಧೆ ಮಾ ಗೆ ರಾಜಾತಿಥ್ಯ ನೀಡಿರುವುದು ಬೆಳಕಿಗೆ ಬಂದಿದ್ದು, ಫೋಟೋಗಳು ವೈರಲ್ ಆಗಿವೆ.


ವರದಕ್ಷಿಣೆ ಕಿರುಕುಳ ಸೇರಿದಂತೆ ಎರಡು ಪ್ರಕರಣಗಳಲ್ಲಿ ಆರೋಪಿಯಾಗಿರುವ ರಾಧೆ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ವಿವೇಕ್ ವಿಹಾರ್ ಪೊಲೀಸ್ ಠಾಣೆಗೆ ಆಗಮಿಸಿದ್ದಾರೆ. ಅವರಿಗೆ ಅದ್ದೂರಿ ಸ್ವಾಗತ ಕೋರಿದ್ದಾರೆ. ತನ್ನ ಭದ್ರತೆ ಕುರಿತು ರಾಧೆ ಮಾ ಪೊಲೀಸ್ ಠಾಣೆಗೆ ಹೋಗಿದ್ದಾಗ ಅಲ್ಲಿನ ಪೊಲೀಸ್ ಅಧಿಕಾರಿ ತಮ್ಮ ಚೇರ್ ಅನ್ನು ರಾಧೆ ಮಾಗೆ ಬಿಟ್ಟುಕೊಟ್ಟಿದ್ದಾರೆ..!

ಪೊಲೀಸ್ ಅಧಿಕಾರಿಯ ಚೇರ್‍ನಲ್ಲಿ ರಾಧೆ ಮಾ ಕುಳಿತಿದ್ದು, ಪಕ್ಕದಲ್ಲಿ ಅಧಿಕಾರಿ ಕೆಂಪು ಶಾಲು ಹೊದ್ಕೊಂಡು ಕೈಕಟ್ಟಿ ನಿಂತಿರುವ ಫೋಟೋ ಈಗ ವೈರಲ್ ಆಗಿದೆ. ಅಷ್ಟೇ ಅಲ್ಲ ಠಾಣೆಯಲ್ಲಿ ರಾಧೆ ಮುಂದಾಳತ್ವದಲ್ಲಿ ಭಜನೆ ಕಾರ್ಯಕ್ರಮ ಕೂಡ ನಡೆದಿದೆಯಂತೆ..! ಈ ಬಗ್ಗೆ ತನಿಖೆ ಆದೇಶಿಸಿಲಾಗಿದೆ.

Share post:

Subscribe

spot_imgspot_img

Popular

More like this
Related

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ ಇತ್ತೀಚಿನ ದಿನಗಳಲ್ಲಿ ಮೌತ್‌ವಾಶ್...

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...