ಕನ್ನಡಿಗ ರಾಹುಲ್ ದ್ರಾವಿಡ್ ಗೆ ಮತ್ತೊಂದು ದೊಡ್ಡ ಜವಾಬ್ದಾರಿ..!

Date:

ಭಾರತ ಕ್ರಿಕೆಟ್ ನ ಯುವಪಡೆಯ ಗುರು, ಕನ್ನಡಿಗ ರಾಹುಲ್ ದ್ರಾವಿಡ್ ಅವರನ್ನೀಗ ಐಸಿಸಿ (ಅಂತರಾಷ್ಟ್ರೀಯ ಕ್ರಿಕೆಟ್ ಸಮಿತಿ) ಭ್ರಷ್ಟಾಚಾರ ನಿಗ್ರಹ ಘಟಕದ ಮೇಲ್ವೀಚರಣೆ ಗುಂಪಿಗೆ ನೇಮಕ ಮಾಡಿದೆ. ಇದರೊಂದಿಗೆ ಕನ್ನಡಿಗ ರಾಹುಲ್ ದ್ರಾವಿಡ್ ಅರ್ಹವಾಗಿಯೇ ಮತ್ತೊಂದು ಹೊಣೆಗಾರಿಕೆ ಹೆಗಲೇರಿದೆ..!

Dravid_bell_Lords_AFP
ಕ್ರಿಕೆಟ್ನಲ್ಲಿ ಭ್ರಷ್ಟಾಚಾರದ ಪ್ರಕರಣಗಳಿಗೆ ಬ್ರೇಕ್ ಹಾಕುವ ಕಾರ್ಯವನ್ನು ಚುರುಕು ಗೊಳಿಸುವ ಉದ್ದೇಶದಿಂದ ಐಸಿಸಿ ಭ್ರಷ್ಟಾಚಾರ ನಿಗ್ರಹ ಘಟಕದ ಮೇಲ್ವೀಚರಣೆ ಸಮಿತಿಯನ್ನು ರಚಿಸಿಕೊಂಡಿದ್ದು, ಈ ಸಮಿತಿಯಲ್ಲಿ ಐಸಿಸಿ ಕಾರ್ಯ ನಿರ್ವಾಹಕ ಸಮಿತಿಯ ಮುಖ್ಯಸ್ಥರು, ಕನ್ನಡಿಗ ರಾಹುಲ್ ದ್ರಾವಿಡ್ ಅಲ್ಲದೇ ಕಾನೂನು ತಜ್ಞ ಲೂಯಿಸ್ ವೆಸ್ಟನ್, ಭ್ರಷ್ಟಾಚಾರ ತಡೆ ಸ್ವತಂತ್ರ ಸಲಹೆಗಾರ ಜಾನ್ ಅಬಾಟ್, ಭ್ರಷ್ಟಾಚಾರ ಘಟಕದ ರೋನಿ ಫ್ಲಾಂಗನ್, ಐಸಿಸಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡೇವಿಡ್ ರಿಚೆಡ್ರ್ಸನ್ ಇದ್ದಾರೆ.
ಸದ್ಯ ರಾಹುಲ್ ದ್ರಾವಿಡ್, ಭಾರತ ಕಿರಿಯರ ತಂಡದ ಕೋಚ್ ಆಗಿ ಸೇವೆ ಸಲ್ಲಿಸ್ತಾ ಇದ್ದಾರೆ. ಪ್ರಸ್ತುತ ಬಾಂಗ್ಲದಲ್ಲಿ ನಡೆಯುತ್ತಿರುವ 19 ವರ್ಷ ವಯಸ್ಸಿನೊಳಗಿನ ವಿಶ್ವಕಪ್ ಟೂರ್ನಿಯಲ್ಲಿ ಭಾರತದ ಹುಡುಗರು ದ್ರಾವಿಡ್ ಮಾರ್ಗದರ್ಶನದಲ್ಲಿ ಗೆಲುವಿನ ನಗೆ ಬೀರುತ್ತಾ, ಉತ್ತಮ ಪ್ರದರ್ಶನ ನೀಡ್ತಾ ಇದ್ದಾರೆ.

Like us on Facebook  The New India Times

www.facebook.com/thenewindiantimes

TNIT Whats App No : 97316 23333

Send Your Stories to : tnitkannada@gmail.com

POPULAR  STORIES :

ಕಾರ್ನ್ ಮಾರಾಟ ಮಾಡುವಾತನ ಅದ್ಭುತ ಸಂಗೀತ..! Corn+Music

ಸೋನುನಿಗಮ್ ಹಾಡಿದ್ದಕ್ಕೇ ಐದು ಜನ ಗಗನಸಖಿಯರು ಅಮಾನತು ಗೊಂಡರು..!

ಅಣ್ಣಂಗೇ ಲವ್ ಆಗಿದೆ ಅಲ್ಲಲ್ಲ, ಹೆಲ್ಮೆಟ್ ಗೆ ಡಿಮ್ಯಾಂಡ್ ಬಂದಿದೆ…! ಇದು ಹೊಸಪೇಟೆ ಹುಡುಗರ ಹೊಸ ಹಾಡು..!

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...