ವರುಣ ಆರ್ಭಟಕ್ಕೆ ಬೆಂಗಳೂರು ತತ್ತರ

Date:

ಬೆಂಗಳೂರಿನ ಹಲವೆಡೆ ಧಾರಾಕಾರವಾಗಿ ವರುಣ ಆರ್ಭಟ ಶುರುವಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಪ್ರತಿನಿತ್ಯ ಬೆಂಗಳೂರಿನ ಜನರಿಗೆ ಮಳೆರಾಯ ದರ್ಶನ ನೀಡುತ್ತಿದ್ದು, ಮಳೆಯಿಂದಾಗಿ ಹೈರಾಣಾಗಿದ್ದಾರೆ. ಅದರಂತೆ ನಗರದ ಮಹದೇವಪುರದ ರೈನ್ ಬೋ ಲೇಔಟ್ ನಲ್ಲಿ ಎರಡು ದಿನವಾದರೂ ಮಳೆ ನೀರು ತಗ್ಗದೇ, ಬಡಾವಣೆ ಒಳಭಾಗದಲ್ಲಿ ದೊಡ್ಡ ಮಟ್ಟದಲ್ಲಿ ಕೆರೆ ನೀರು ಹರಿಯುತ್ತಿರುವ ದೃಶ್ಯ ಕಂಡು ಬಂದಿದೆ. ಹಬ್ಬದ ದಿನದಂದು ಬಡಾವಣೆ ನಿವಾಸಿಗಳು ಆತಂಕದಲ್ಲೇ ಇದ್ದು, ಟ್ರಾಕ್ಟರ್ ಮೂಲಕ ಬಡಾವಣೆಗೆ ಹೋಗಿ ಬರುತ್ತಿದ್ದಾರೆ. ನಿನ್ನೆಯ ಪರಿಸ್ಥಿತಿ ಇಂದು ಕೂಡ ಮುಂದುವರಿದಿದ್ದು, ಗೇಟ್ ಮುಂಭಾಗದಲ್ಲಿ ಎರಡುವರೆ ಅಡಿಗೂ ಹೆಚ್ಚು ನೀರು ತುಂಬಿ ಬರುತ್ತಿದೆ. ಇಡೀ ಬಡಾವಣೆ ಮುಂಭಾಗದಲ್ಲಿ ಕೆರೆಯಂತೆ ನೀರು ತುಂಬಿದ್ದು, ಜಿರಿ ಜಿರಿ ವಾತಾವರಣದಲ್ಲಿ ನಿವಾಸಿಗಳ ಕಷ್ಟ ಹೇಳತ್ತೀರದ್ದಾಗಿದೆ.

Share post:

Subscribe

spot_imgspot_img

Popular

More like this
Related

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಬೆಂಗಳೂರು: ರಾಜ್ಯದಾದ್ಯಂತ ಮಳೆಯ...

ಸಮಾಜದಲ್ಲಿ ದ್ವೇಷಪೂರಿತ ಭಾಷಣ ಮಾಡುವವರ ವಿರುದ್ಧ FIR: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಸಮಾಜದಲ್ಲಿ ದ್ವೇಷಪೂರಿತ ಭಾಷಣ ಮಾಡುವವರ ವಿರುದ್ಧ FIR: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ಮಂಗಳೂರು:...

ನಡು ರಸ್ತೆಯಲ್ಲೇ ಹಲ್ಲೆ; ಮಾಜಿ ಶಾಸಕ ಬೆಳ್ಳಿ ಪ್ರಕಾಶ್ ಅಳಿಯನ ಮೇಲೆ ದಾಳಿ!

ನಡು ರಸ್ತೆಯಲ್ಲೇ ಹಲ್ಲೆ; ಮಾಜಿ ಶಾಸಕ ಬೆಳ್ಳಿ ಪ್ರಕಾಶ್ ಅಳಿಯನ ಮೇಲೆ...

ಕರ್ನಾಟಕದಲ್ಲಿ ವರುಣಾರ್ಭಟ: ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್​ ಘೋಷಣೆ

ಕರ್ನಾಟಕದಲ್ಲಿ ವರುಣಾರ್ಭಟ: ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್​ ಘೋಷಣೆ ಬೆಂಗಳೂರು: ರಾಜ್ಯದಾದ್ಯಂತ...