ಭಾರಿ ಅವಾಂತರ ಸೃಷ್ಟಿಮಾಡಿದ ಮಳೆ‌ರಾಯ

Date:

ಬೆಂಗಳೂರಿನ ಜನರಿಗೆ ಮಳೆ‌ರಾಯ ಭಾರಿ ಅವಾಂತರ ಸೃಷ್ಟಿ ಮಾಡಿದ್ದಾನೆ. ಮನೆಗಳಿಗೆ ಮತ್ತು ಅಪಾರ್ಟ್ಮೆಂಟ್​ನ‌ ನೆಲಮಹಡಿಗಳು ಮಳೆ ನೀರಿನಿಂದ ತುಂಬಿ ಜನಜೀವನ ಅತಂತ್ರವಾಗಿದೆ. ಅದೇ ರೀತಿ ಬೆಂಗಳೂರು ಹೊರವಲಯದ ಬೆಳ್ಳಂದೂರು ಹೊರ ವರ್ತುಲ ರಸ್ತೆಯ ಇಕೋ ಸ್ಪೇಸ್ ಬಳಿ ಮಳೆ ನೀರು ತುಂಬಿ ರಸ್ತೆಗೆ ಹರಿದ ಪರಿಣಾಮ, ಬೆಂಗಳೂರಿನ ಹೊರವಲಯದಲ್ಲಿರುವ ಟೆಕ್ ಪಾರ್ಕ್‌ಗಳಿಗೆ ನಗರವನ್ನು ಸಂಪರ್ಕಿಸುವ ಹೊರ ವರ್ತುಲ ರಸ್ತೆ ಮುಳುಗಡೆಯಾಗಿದ್ದು, ಭಾರಿ ಟ್ರಾಫಿಕ್ ಸಮಸ್ಯೆ ಉಂಟಾಗಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ. ಸರ್ಜಾಪುರ ರಸ್ತೆಯಲ್ಲಿನ ರೈಂಬೋ ಡ್ರೈವ್ ಲೇಔಟ್ ಸಂಪೂರ್ಣ ಜಲಾವೃತಗೊಂಡು ಬೋಟ್ ಮೂಲಕ ಜನರನ್ನು ಸ್ಥಳಾಂತರ ಮಾಡಲಾಗುತ್ತಿದೆ. ಸರ್ಜಾಪುರ ರಸ್ತೆ ಒಂದೇ ತಿಂಗಳಲ್ಲಿ ಮೂರನೇ ಬಾರಿ ಕೆರೆಯಂತಾಗಿದೆ. ನಿನ್ನೆ ರಾತ್ರಿ ಸುರಿದ ಮಳೆಗೆ ಎಕೋ ಸ್ಪೇಸ್, ಮುನ್ನೇಕೊಳಲಿನ ಶಾಂತಿನಿಕೇತನ, ತೂಬರಪಾಳ್ಯದ ಬಿಇಎಂಎಲ್, ವೈಟ್ ಫೀಲ್ಡ್ ನ ಡಿಎನ್​ಎ ಇಂಡಸ್ ವ್ಯೂವ್ ಸೇರಿದಂತೆ ಹಲವೆಡೆ ಅಪಾರ್ಟ್ಮೆಂಟ್​ಗಳಿಗೆ ಮಳೆ ನೀರು ನುಗ್ಗಿದ್ದರ ಬಗ್ಗೆ ತಿಳಿದ ಶಾಸಕ ಅರವಿಂದ ಲಿಂಬಾವಳಿ ಭೇಟಿ ನೀಡಿ ಪರಿಶೀಲಿಸಿದರು. ಕ್ಷೇತ್ರದಲ್ಲಿ ರಾಜಕಾಲುವೆಗಳು ಒತ್ತುವರಿಯಾದ ಜಾಗವನ್ನು ತೆರವುಗೊಳಿಸಿ, ತ್ವರಿತವಾಗಿ ಸಮಸ್ಯೆಗಳಿಗೆ ಮುಕ್ತಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

Share post:

Subscribe

spot_imgspot_img

Popular

More like this
Related

ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯ ಸುರೇಶ್ ವಿರುದ್ಧ ಹಿಟ್ ಅಂಡ್ ರನ್ ಪ್ರಕರಣ!

ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯ ಸುರೇಶ್ ವಿರುದ್ಧ ಹಿಟ್ ಅಂಡ್...

ಖಾಲಿ ಹೊಟ್ಟೆಗೆ ಬೆಳ್ಳುಳ್ಳಿ ತಿನ್ನುವುದು ಒಳ್ಳೆಯದೇ? ಇಲ್ಲಿದೆ ಉತ್ತರ

ಖಾಲಿ ಹೊಟ್ಟೆಗೆ ಬೆಳ್ಳುಳ್ಳಿ ತಿನ್ನುವುದು ಒಳ್ಳೆಯದೇ? ಇಲ್ಲಿದೆ ಉತ್ತರ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ...

ಕರ್ನೂಲ್ ನಲ್ಲಿ ಖಾಸಗಿ ಬಸ್ ಹೊತ್ತಿ ಉರಿದು 10ಕ್ಕೂ ಹೆಚ್ಚು ಮಂದಿ ಸಜೀವ ದಹನ

ಕರ್ನೂಲ್ ನಲ್ಲಿ ಖಾಸಗಿ ಬಸ್ ಹೊತ್ತಿ ಉರಿದು 10ಕ್ಕೂ ಹೆಚ್ಚು ಮಂದಿ...

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್ ಬಾಗಲಕೋಟೆ: ಮುಖ್ಯಮಂತ್ರಿ...