No menu items!
12.7 C
Munich
Friday, June 5, 2026

ಕೇರಳದಲ್ಲಿ ಮುಂಗಾರು ಪ್ರವೇಶ ಬೆನ್ನಲ್ಲೇ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯ ಆರ್ಭಟ !

Must read

ಕೇರಳದಲ್ಲಿ ಮುಂಗಾರು ಪ್ರವೇಶ ಬೆನ್ನಲ್ಲೇ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯ ಆರ್ಭಟ !

ಉಡುಪಿ/ಮಂಗಳೂರು: ಕೇರಳಕ್ಕೆ ಮುಂಗಾರು ಮಾರುತ ಪ್ರವೇಶಿಸಿದ ಬೆನ್ನಲ್ಲೇ ಕರ್ನಾಟಕದ ಕರಾವಳಿ ಭಾಗಗಳಲ್ಲೂ ಮಳೆಯ ಚಟುವಟಿಕೆ ಚುರುಕುಗೊಂಡಿದೆ. ಉಡುಪಿ, ಮಂಗಳೂರು ಸೇರಿದಂತೆ ಹಲವು ಪ್ರದೇಶಗಳಲ್ಲಿ ಉತ್ತಮ ಮಳೆಯಾಗುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ತಂಪಾದ ವಾತಾವರಣ ನಿರ್ಮಾಣವಾಗಿದೆ.
ಸಾಮಾನ್ಯವಾಗಿ ಕೇರಳದಲ್ಲಿ ಮುಂಗಾರು ಆರಂಭವಾದ ಒಂದು ಅಥವಾ ಎರಡು ದಿನಗಳೊಳಗೆ ಕರ್ನಾಟಕದ ಕರಾವಳಿ ಭಾಗಗಳಿಗೂ ಅದರ ಪ್ರಭಾವ ತಲುಪುತ್ತದೆ. ಅದರಂತೆ ಇಂದು ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಮಳೆಯ ವಾತಾವರಣ ಕಂಡುಬಂದಿದೆ.
ಮಳೆಯ ತೀವ್ರತೆ ಹೆಚ್ಚುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿನ ಕಾಲುವೆಗಳು, ಚರಂಡಿಗಳು ಮತ್ತು ನೀರು ಹರಿವಿನ ಮಾರ್ಗಗಳ ಸ್ವಚ್ಛತೆಯನ್ನು ತಕ್ಷಣ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸ್ವರೂಪ್ ಟಿ.ಕೆ. ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಪ್ರಕೃತಿ ವಿಕೋಪ ಅಥವಾ ತುರ್ತು ಪರಿಸ್ಥಿತಿಗಳನ್ನು ಎದುರಿಸಲು ಅಗ್ನಿಶಾಮಕ ದಳ ಸೇರಿದಂತೆ ಸಂಬಂಧಿತ ಇಲಾಖೆಗಳ ಅಧಿಕಾರಿಗಳು ಸದಾ ಸನ್ನದ್ಧರಾಗಿರಬೇಕು ಎಂದು ಜಿಲ್ಲಾಡಳಿತ ನಿರ್ದೇಶನ ನೀಡಿದೆ.
ಇದೇ ವೇಳೆ ಹವಾಮಾನ ಇಲಾಖೆ ಕರಾವಳಿ ಭಾಗಗಳಿಗೆ ಎಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಸಮುದ್ರದಲ್ಲಿ ಗಾಳಿ ವೇಗ ಹೆಚ್ಚಾಗುವ ಹಾಗೂ ಅಲೆಗಳ ಅಬ್ಬರ ತೀವ್ರಗೊಳ್ಳುವ ಸಾಧ್ಯತೆ ಇರುವುದರಿಂದ ಸುರಕ್ಷತೆಗೆ ಆದ್ಯತೆ ನೀಡುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

- Advertisement -spot_img

More articles

- Advertisement -spot_img

Latest article