ರೈನ್ ಬೋ ಲೇಔಟ್ ನಲ್ಲಿ ಕಳ್ಳರ ಹಾವಳಿ

Date:

ಕಳ್ಳತನ ಕಡಿಮೇ ಆಯ್ತು ಅನ್ನುವಷ್ಟರಲ್ಲಿ , ಸರಣಿಗಳ್ಳತನ ಪ್ರಕರಣ ಬೆಳಕಿಗೆ ಬಂದಿದೆ . ಬೆಂಗಳೂರಿನ ರೈನ್ ಬೋ ಲೇಔಟ್​ನಲ್ಲಿ ಸರಣಿ ಕಳ್ಳತನವಾಗಿದ್ದು, ಐಶಾರಾಮಿ ಮನೆಗಳಲ್ಲಿದ್ದ ಚಿನ್ನಾಭರಣ ಕಳ್ಳರು ದೋಚಿದ್ಧಾರೆ. ಮನೆಗೆ ನೀರು ನುಗ್ಗಿದ್ದರಿಂದ ಮನೆಯಲ್ಲಿ ಯಾರೂ ಇರಲಿಲ್ಲ, ಕರೆಂಟ್​ ಇಲ್ಲದೇ ಇರುವ ವೇಳೆ ಮನೆಗೆ ನುಗ್ಗಿ ಕಳವು ಮಾಡಿದ್ಧಾರೆ. ಸಿಸಿಟಿವಿ ವರ್ಕ್ ಆಗ್ತಿಲ್ಲ ಅನ್ನೋದನ್ನ ಖಾತ್ರಿ ಮಾಡ್ಕೊಂಡು ಲೂಟಿ ಮಾಡಿದ್ದಾರೆ.
ಮನೆಯವರು ವಾಪಸ್ ಬಂದು ನೋಡಿದಾಗ ಕಳ್ಳತನ ಪತ್ತೆಯಾಗಿದೆ. ಬೆಳ್ಳಂದೂರು ಪೊಲೀಸ್​ ಠಾಣೆ ವ್ಯಾಪ್ತಿಯ ರೈನ್​​ ಬೋ ಲೇಔಟ್​ನ ಮೂರು ಮನೆಗಳಲ್ಲಿ ಕಳ್ಳತನ ನಡೆದಿದ್ದು, ಉದ್ಯಮಿ ಧರ್ಮತೇಜ್​​, IT ಸಿಬ್ಬಂದಿ ಮಂಜುನಾಥ್​​, ಉದಯ ಭಾಸ್ಕರ್​ ಮನೆ ಲೂಟಿ ಮಾಡಿದ್ಧಾರೆ. ಖತರ್ನಾಕ್​​ ಕಳ್ಳರು ಫ್ಲಾಟ್​ಗಳಲ್ಲಿ ಕಳವು ಮಾಡಿದ್ಧಾರೆ. ಎರಡು ವಜ್ರದ ಬಳೆ, ಡೈಮೆಂಡ್​ ಚೈನ್​​, ಮೂರು ಓಲೆ , 10 ಜೊತೆ ಚಿನ್ನದ ಓಲೆ, ಚಿನ್ನದ ಬಳೆ, ಗೋಲ್ಡ್​ ಬ್ರಾಸ್ಲೆಟ್​, 2 ಗೋಲ್ಡ್​ ಪೆಂಡೆಂಟ್​, 3 ಚಿನ್ನದ ಉಂಗುರ, ವಜ್ರ ಸಹಿತ ಚಿನ್ನದ ಸರ ಕಳ್ಳತನವಾಗಿದೆ. ಈ ಸಂಬಂಧ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Share post:

Subscribe

spot_imgspot_img

Popular

More like this
Related

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್ ಬಾಗಲಕೋಟೆ: ಮುಖ್ಯಮಂತ್ರಿ...

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ದಟ್ಟಣೆ

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ...

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ ಏನು..?

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ...

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ...