ಅಪ್ಪಾಜಿ ಹುಟ್ಟುಹಬ್ಬಕ್ಕೆ ಅಪ್ಪು ಬರಲಿಲ್ಲ ಯಾಕೆ..?

Date:

ಇಡೀ ರಾಜ್ಯಾದ್ಯಂತ ಅಣ್ಣಾವ್ರ ಹುಟ್ಟುಹಬ್ಬವನ್ನು ನಾಡಹಬ್ಬದಂತೆ ಸಂಭ್ರಮ ಸಡಗರದಿಂದ ಆಚರಿಸಲಾಗುತಿತ್ತು. ಅಣ್ಣಾವ್ರ ಕುಟುಂಬಸ್ಥರು ಸಮಾಧಿ ಸ್ಥಳಕ್ಕೆ ಆಗಮಿಸಿ ವಿಶೇಷ ಪೂಜೆ ಪುನಸ್ಕಾರ ಸಲ್ಲಿಸೋ ಮುಖಾಂತರ ಅಪ್ಪಾಜಿಯ ಬರ್ತ್ ಡೇ ಸೆಲೆಬ್ರೇಟ್ ಮಾಡಿದ್ರು.

ಸಾಮಾನ್ಯವಾಗಿ ರಾಜಕುಮಾರ್ ಕುಟುಂಬದಲ್ಲಿ ಯಾವುದೇ ಆಚರಣೆ ಅಂದ್ರೂ ಅಲ್ಲಿ ಇಡೀ ಕುಟುಂಬ ಒಟ್ಟಾಗಿ ಸೇರಿರುತ್ತೆ.  ಆ ಕುಟುಂಬವನ್ನ ಕಣ್ತುಂಬಿಕೊಳ್ಳೋದೆ ಅಭಿಮಾನಿಗಳ ಪಾಲಿಗೆ ಒಂದು ಹಬ್ಬ. ಇಂತದ್ದೇ ಹಬ್ಬದ ವಾತಾವರಣ ಕಣ್ತುಂಬಿಕೊಳ್ಳಲು ಬಂದ ಅಭಿಮಾನಿಗಳಿಗೆ ಕೊಂಚ ಮಟ್ಟಿಗಿನ ನಿರಾಸೆಯಾಗಿದ್ದಂತೂ ಸತ್ಯ. ಕಾರಣ ಅಭಿಮಾನಿಗಳ ಪ್ರೀತಿಯ ಅಪ್ಪು ಎಲ್ಲೂ ಕಾಣಲೇ ಇಲ್ಲ.

ಅಪ್ಪಾಜಿಗೆ ಸಂಬಂಧಪಟ್ಟ ಯಾವ ಕಾರ್ಯಕ್ರಮವನ್ನೂ ಮಿಸ್ ಮಾಡ್ಕೊಳ್ಳದ ಅಪ್ಪು ಅಪ್ಪಾಜಿ ಬರ್ತ್ ಡೇ ಗೆ ಬರದೇ ಇದ್ದದ್ದು ಯಾಕೆ ಅನ್ನೋ ಪ್ರಶ್ನೆ ಅಭಿಮಾನಿಗಳ ತಲೆಗೆ ಹುಳ ಬಿಟ್ಟಿತ್ತು. ಆದ್ರೆ ಕಾಯಕವೇ ಕೈಲಾಸ ಅಂತ ನಂಬಿರೋ ಅಪ್ಪು ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ.

ತಮ್ಮ ಹೊಸ ಚಿತ್ರ ‘ರಾಜಕುಮಾರ’ ಶೂಟಿಂಗ್‌ಗಾಗಿ ಹೊರದೇಶಕ್ಕೆ ತೆರಳಿದ್ದಾರೆ. ಇಷ್ಟನ್ನು ಹೊರತುಪಡಿಸಿ ಇನ್ಯಾವುದೇ ಕಾರಣ ಇಲ್ಲ ಅಂತ ಅವರ ಆಪ್ತವಲಯ ಸ್ಪಷ್ಟಪಡಿಸಿದೆ. ಇನ್ನು ಗಾಂಧಿನಗರದ ಅಂತೆ ಕಂತೆಗಳು ಇದ್ದದ್ದೇ. ಆದ್ರೆ ಅಣ್ಣಾವ್ರನ್ನ ಆರಾಧಿಸೋ ಪ್ರತಿಯೊಬ್ಬರಿಗೂ ಪ್ರತಿದಿನವೂ ಹುಟ್ಟುಹಬ್ಬವೇ.

  •  “ಶ್ರೀ”

POPULAR  STORIES :

 

ಮಿಸ್ಡ್ ಕಾಲ್ ಗೆಳೆಯ..! ಅವನ ಸಾವಿನ ಜೊತೆ ಇವಳು ಒಂದಾದಳು..!?

ಮೋದಿ ದೇಹದಲ್ಲಿ ಅಹ್ಮದ್ ಖಾನ್ `ಆತ್ಮ..!!’ ಮೋದಿಯಲ್ಲ, ಇಂದಿರಾ ಗಾಂಧಿಯಿದ್ದಿದ್ದರೂ ಆಗುತ್ತಿತ್ತು ಮಾರಣಹೋಮ..!!

`ಸೆಕ್ಸ್’ ಸೈಟುಗಳ ಹಾಟ್ ವಿಚಾರ..!? ಅಶ್ಲೀಲ ಎಂಎಂಎಸ್ ಹೇಗೆಲ್ಲಾ ಸೃಷ್ಟಿಯಾಗುತ್ತೆ ಗೊತ್ತಾ..!?

Share post:

Subscribe

spot_imgspot_img

Popular

More like this
Related

ಪ್ರತಿದಿನ ಬೆಳಗ್ಗೆ ಸೂರ್ಯನಿಗೆ ನಮಸ್ಕಾರ ಮಾಡಬೇಕೇ? ಇಲ್ಲಿದೆ ಉತ್ತರ

ಪ್ರತಿದಿನ ಬೆಳಗ್ಗೆ ಸೂರ್ಯನಿಗೆ ನಮಸ್ಕಾರ ಮಾಡಬೇಕೇ? ಇಲ್ಲಿದೆ ಉತ್ತರ ಪ್ರತಿದಿನ ಬೆಳಗ್ಗೆ ಸೂರ್ಯೋದಯದ...

ರಾಜ್ಯದಲ್ಲಿ ಅಗ್ನಿಶಾಮಕ ವಾಹನಗಳ ಖರೀದಿಗೆ ಕ್ರಮ: ಡಾ.ಜಿ.ಪರಮೇಶ್ವರ

ರಾಜ್ಯದಲ್ಲಿ ಅಗ್ನಿಶಾಮಕ ವಾಹನಗಳ ಖರೀದಿಗೆ ಕ್ರಮ: ಡಾ.ಜಿ.ಪರಮೇಶ್ವರ ಬೆಳಗಾವಿ: ರಾಜ್ಯದ ವಿವಿಧ ಅಗ್ನಿಶಾಮಕ...

ಬೆಂಗಳೂರು ರಸ್ತೆ ರೋಡ್ ರೇಜ್: ಯುವ ನಿರ್ದೇಶಕ ಸೂರ್ಯ ಹೊಸ ಶಾರ್ಟ್ ಫಿಲ್ಮ್

ಬೆಂಗಳೂರು ರಸ್ತೆ ರೋಡ್ ರೇಜ್: ಯುವ ನಿರ್ದೇಶಕ ಸೂರ್ಯ ಹೊಸ ಶಾರ್ಟ್...

ವಸತಿ ರಹಿತ ಮೀನುಗಾರರಿಗೆ 10,000 ವಸತಿ ನೀಡಿದ್ದೇವೆ: ಸಚಿವ ಮಂಕಾಳ ಎಸ್. ವೈದ್ಯ

ವಸತಿ ರಹಿತ ಮೀನುಗಾರರಿಗೆ 10,000 ವಸತಿ ನೀಡಿದ್ದೇವೆ: ಸಚಿವ ಮಂಕಾಳ ಎಸ್....