ಉತ್ತರ ಪ್ರದೇಶ: ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಅವರು ಕೃಷ್ಣಶಿಲೆಯಿಂದ ಕೆತ್ತನೆ ಮಾಡಿದ ಸುಮಾರು 150-200 ಕೆಜಿ ತೂಕದ ಈ ವಿಗ್ರಹವನ್ನು ಬಿಗಿ ಭದ್ರತೆಯ ಮೂಲಕ ಮೆರವಣಿಗೆಯೊಂದಿಗೆ ದೇವಸ್ಥಾನಕ್ಕೆ ತರಲಾಗಿತ್ತು. ಗರ್ಭಗುಡಿಯ ಪೀಠದಲ್ಲಿ ಪ್ರತಿಷ್ಠಾಪಿಸಲಾಗಿರುವ ಬಾಲರಾಮನ ಮೂರ್ತಿ ಚಿತ್ರ ಬಿಡುಗಡೆಗೊಂಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿದೆ.
ಧಾರ್ಮಿಕ ವಿಧಿ ವಿಧಾನಗಳು ನೇರವೇರಿದ ಬಳಿಕ ಕೃಷ್ಣಶಿಲೆಯಲ್ಲಿ ಮೂಡಿದ 5 ವರ್ಷದ ರಾಮನ 51 ಇಂಚು ಎತ್ತರದ ಬಾಲರಾಮನ ಮೂರ್ತಿಯನ್ನ ಪ್ರತಿಷ್ಠಾಪಿಸಲಾಯಿತು. ಜನವರಿ 22ರಂದು ರಾಮಭಕ್ತರು ಇದರ ರೂಪ ಕಣ್ತುಂಬಿಕೊಳ್ಳುವ ಸಮಯ ಮತ್ತಷ್ಟು ಸನ್ನಿಹಿತವಾದಂತಾಗಿದೆ. ಅಂದು ಪ್ರಧಾನಿ ಮೋದಿ ನೇತೃತ್ವದಲ್ಲಿ ಪ್ರಾಣ ಪ್ರತಿಷ್ಠೆ ನೆರವೇರಲಿದೆ.