ಬಿಜೆಪಿ ತಮಗೆ ಬೇಕಾದಂತೆ ವಾರ್ಡ್ ವಿಂಗಡಣೆ ಮಾಡಿಕೊಂಡಿದೆ

Date:

ಬೆಂಗಳೂರು : ಬಿಜೆಪಿ ತಮಗೆ ಬೇಕಾದಂತೆ ವಾರ್ಡ್ ವಿಂಗಡಣೆ ಮಾಡಿಕೊಂಡಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಆರೋಪಿಸಿದ್ದಾರೆ. ಈ ಸಂಬಂಧ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಬಿಬಿಎಂಪಿ ವಾರ್ಡ್ ವಿಂಗಡಣೆ ಮಾಡಿದ್ದರ ಕುರಿತು ಮೂರು ಸಾವಿರಕ್ಕೂ ಹೆಚ್ಚು ಆಕ್ಷೇಪಣೆ ಬಂದಿದ್ದವು. ವಿಂಗಡಣೆ ಅವೈಜ್ಞಾನಿಕವಾಗಿ ಮಾಡಲಾಗಿದೆ. ಹಲವು ಕ್ಷೇತ್ರಗಳಿಂದ ಆಕ್ಷೇಪಣೆ ಸಲ್ಲಿಕೆಯಾಗಿದೆ. ನನ್ನ ಕ್ಷೇತ್ರದಲ್ಲೂ ವಾರ್ಡ್ ವಿಂಗಡಣೆಯಾಗಿದೆ. ಜಯನಗರದಲ್ಲೂ ವಾರ್ಡ್ ವಿಂಗಡಣೆಯಾಗಿದೆ. ಸರಿಯಾದ ಮಾದರಿಯಲ್ಲಿ ವಾರ್ಡ್ ವಿಂಗಡಿಸಿಲ್ಲ ಎಂದು ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದರು. 35 ಸಾವಿರಕ್ಕೆ ಅನುಗುಣವಾಗಿ ಮಾಡಿದ್ದಾರೆ, ಕೆಲವು ಕಡೆ 39 ಸಾವಿರ ಜನಸಂಖ್ಯೆಯಿದೆ. ಬಿಜೆಪಿ ಶಾಸಕರಿರುವ ಕಡೆ 20 ಕ್ಕೆ ಮಾಡಿಕೊಂಡಿದ್ದಾರೆ. ವಾರ್ಡ್ ಗಳಿಗೆ ಹೆಸರು ಬದಲಾವಣೆ ಮಾಡಿದ್ದಾರೆ. ಹೆಸರು ಬದಲಾಯಿಸುವುದು ಸರ್ಕಾರಕ್ಕಿದೆ. ಆದರೆ ವಾರ್ಡ್ ವಿಂಗಡಿಸಿದವರೆ ಹೆಸರು ಬದಲಾವಣೆ ಮಾಡಿದ್ದಾರೆ. ಬಿಜೆಪಿ ತಮಗೆ ಬೇಕಾದಂತೆ ಅವರು ವಿಂಗಡಿಸಿದ್ದಾರೆ ಎಂದು ರಾಮಲಿಂಗಾರೆಡ್ಡಿ ಆರೋಪ ಮಾಡಿದ್ದಾರೆ.

Share post:

Subscribe

spot_imgspot_img

Popular

More like this
Related

35ರ ನಂತರ, ಪ್ರೆಗ್ನನ್ಸಿಗೆ ಪ್ಲಾನ್ ಮಾಡುವವರು ಈ ಪರೀಕ್ಷೆಗಳನ್ನು ಮಾಡಿಸಿ!

35ರ ನಂತರ, ಪ್ರೆಗ್ನನ್ಸಿಗೆ ಪ್ಲಾನ್ ಮಾಡುವವರು ಈ ಪರೀಕ್ಷೆಗಳನ್ನು ಮಾಡಿಸಿ! 35 ವರ್ಷದ...

India vs Pakistan T20 matchಗೆ ಕ್ಷಣಗಣನೆ: ಕೊಲಂಬೊದಲ್ಲಿ ಹೈವೋಲ್ಟೇಜ್ ಕಾದಾಟಕ್ಕೆ ವೇದಿಕೆ ಸಿದ್ಧ

India vs Pakistan T20 matchಗೆ ಕ್ಷಣಗಣನೆ: ಕೊಲಂಬೊದಲ್ಲಿ ಹೈವೋಲ್ಟೇಜ್ ಕಾದಾಟಕ್ಕೆ...

2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ – ರಾಜ್ಯದ ಜಿಡಿಪಿ ದೇಶದಲ್ಲೇ ನಂಬರ್ ಒನ್: ಸಿಎಂ ಸಿದ್ದರಾಮಯ್ಯ

2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ – ರಾಜ್ಯದ ಜಿಡಿಪಿ...

ಬಿಕ್ಲು ಶಿವ ಹತ್ಯೆ ಪ್ರಕರಣ: ಶಾಸಕ ಬೈರತಿ ಬಸವರಾಜ್ ಕಸ್ಟಡಿಗೆ ಸಿಐಡಿ ಮನವಿ

ಬಿಕ್ಲು ಶಿವ ಹತ್ಯೆ ಪ್ರಕರಣ: ಶಾಸಕ ಬೈರತಿ ಬಸವರಾಜ್ ಕಸ್ಟಡಿಗೆ ಸಿಐಡಿ...