ಗೂಂಡಾಗಳನ್ನು ಮಟ್ಟ ಹಾಕುಲು ಏನು ಬೇಕೋ ಅದನ್ನು ಮಾಡುತ್ತಿದ್ದೇವೆ

Date:

ಗೂಂಡಾಗಳನ್ನು ಮಟ್ಟ ಹಾಕುಲು ಏನು ಬೇಕೋ ಅದನ್ನು ಮಾಡುತ್ತಿದ್ದೇವೆ ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ. ಈ ಸಂಬಂಧ ವಿಧಾನಸೌಧದಲ್ಲಿ ಮಾತನಾಡಿದ ಅವರು, ಗೂಂಡಾಗಳನ್ನು ಮಟ್ಟ ಹಾಕುಲು ಏನು ಬೇಕೋ ಅದನ್ನು ಮಾಡುತ್ತಿದ್ದೇವೆ. ಕೊಲೆ ಹಿಂದು ಆಗಿರಬಹುದು, ಮುಸ್ಲಿಂ ಆಗಿರಬಹುದು. ಸರ್ಕಾರ ನಡೆಸುವವರು ಕಠಿಣ ಕ್ರಮ ತೆಗೆದುಕೊಳ್ಳುತ್ತಾರೆ ಎಂದರು. ಈ ಕುರಿತು ಹಿಂದೆ ಮುಂದೆ ಏನೂ ನೋಡಲ್ಲ. ಯಾವುದೇ ಕನಿಕರ, ಯಾವುದೇ ಕರ್ಟಸಿ ಯಾರ ಮೇಲೂ ತೋರಿಸಲ್ಲ. ವಿಪಕ್ಷಗಳು ಅವರ ಕಾಲದಲ್ಲಿ ಏನಾಯ್ತು ಅಂತ ಮುಚ್ಚಿಟ್ಟು, ಈಗ ಏನಾಯ್ತು ಅಂತ ಕಾಮೆಂಟ್ ಮಾಡೋಕು ಮುನ್ನ ಯೋಚನೆ ಮಾಡಬೇಕು. ಶಿವಾಜಿನಗರದಲ್ಲಿ ಹಾಡುಹಗಲೇ ಕೊಲೆ ಆಯ್ತು ಸಿದ್ದರಾಮಯ್ಯ ಸರ್ಕಾರ ಇತ್ತು. ಆಗ ಏನು ಮಾಡ್ತಾ ಇದ್ರು ಸಿದ್ಧರಾಮಯ್ಯ ಎಂದು ವಾಗ್ದಾಳಿ ನಡೆಸಿದರು. ಬಿಜೆಪಿ ಕೆಲವು ಸಂಘಟನೆಗಳಿಗೆ ಫಂಡ್ ಮಾಡುತ್ತೆ ಅನ್ನೋದನ್ನು ಅಲ್ಲಗಳೆಯುತ್ತೇನೆ. ನಮ್ಮ ಸರ್ಕಾರ ಬಂದ ನಂತರ ಕಾನೂನು ಸುವ್ಯವಸ್ಥೆ ಸರಿ ಮಾಡಿದ್ದೇವೆ. ಕೋಮು ಗಲಭೆಗೆ ಎಂದೂ ನಾವು ಅವಕಾಶ ಕೊಡಲ್ಲ. ಭಟ್ಕಳ, ಕರಾವಳಿ ಪ್ರದೇಶದಲ್ಲಿ ಹಿಂದೆಯಿಂದಲೂ ಈ ರೀತಿ ನಡೀತಾ ಇದೆ. ನಮ್ಮ ಸರ್ಕಾರ ಬಂದ ಮೇಲೆ ಒಂದಿಷ್ಟು ಕಂಟ್ರೋಲ್ ಆಗಿದೆ. ಉದ್ವೇಗದಲ್ಲಿ ಯಾರು ಬೇಕಾದರೂ ಎನ್​​ಕೌಂಟರ್ ವಿಚಾರ ಹೇಳಬಹುದು ಎಂದರು.

Share post:

Subscribe

spot_imgspot_img

Popular

More like this
Related

ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಬೈರತಿ ಬಸವರಾಜ್ ಬಂಧನ

ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಬೈರತಿ ಬಸವರಾಜ್ ಬಂಧನದೇವನಹಳ್ಳಿ: ಬಿಕ್ಲು...

ಬಿಕ್ಲು ಶಿವ ಕೊಲೆ ಪ್ರಕರಣ: ಬೈರತಿ ಬಸವರಾಜ್ ಬಂಧನಕ್ಕೆ ಸಿಐಡಿ ತೀವ್ರ ಶೋಧ

ಬಿಕ್ಲು ಶಿವ ಕೊಲೆ ಪ್ರಕರಣ: ಬೈರತಿ ಬಸವರಾಜ್ ಬಂಧನಕ್ಕೆ ಸಿಐಡಿ ತೀವ್ರ...

ಸುದ್ದಿ ವಾಹಿನಿಗಳ ಟಿ ಆರ್ ಪಿ ಪಟ್ಟಿ ರಿಲೀಸ್ ಯಾವ ನ್ಯೂಸ್ ಚಾನೆಲ್ ನಂ1 !

ಸುದ್ದಿ ವಾಹಿನಿಗಳ ಟಿ ಆರ್ ಪಿ ಪಟ್ಟಿ ರಿಲೀಸ್ ಯಾವ ನ್ಯೂಸ್...

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 1.7 ಕೆಜಿ ಹಶೀಶ್ ಸೀಜ್

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 1.7 ಕೆಜಿ ಹಶೀಶ್ ಸೀಜ್ದೇವನಹಳ್ಳಿ: ಕೆಂಪೇಗೌಡ...