ಪ್ರವಾಹದಿಂದ ತತ್ತರಿಸಿದ ಕೇರಳದಲ್ಲಿ ಇಲಿಜ್ವರದಿಂದ 30ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ವರದಿ ಬೆನ್ನಲ್ಲೇ ಕರ್ನಾಟಕದಲ್ಲೂ ಇಲಿ ಜ್ವರದ ಭೀತಿ ಎದುರಾಗಿದೆ.
ಕಳೆದ ಜನವರಿಯಿಂದ ಇಲ್ಲಿಯವರೆಗೆ ಒಟ್ಟಾರೆ 136 ಇಲಿಜ್ವರ ಪ್ರಕರಣಗಳು ಪತ್ತೆಯಾಗಿವೆ. ಈ ಬಗ್ಗೆ ಆರೋಗ್ಯ ಇಲಾಖೆ ಖಚಿತ ಮಾಹಿತಿ ನೀಡಿದೆ.
ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಕರಣಗಳು ಕಂಡುಬಂದಿವೆ. ಈ ಜ್ವರ ಮಳೆಗಾಲದಲ್ಲಿ ಬರುವ ಕಾಯಿಲೆ. ಕಳೆದ ವರ್ಷ ಈ ಅವಧಿಯಲ್ಲಿ 187 ಇಲಿ ಜ್ವರ ಪ್ರಕರಣಗಳು ವರದಿಯಾಗಿದ್ದವು. ಈ ವರ್ಷ ಇದರ ಪ್ರಮಾಣ ಕಡಮೆ ಆಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಡಾ. ಬಿ.ಜಿ ಪ್ರಕಾಶ್ಕುಮಾರ್ ತಿಳಿಸಿದ್ದಾರೆ.
ಜ್ವರ, ಮೈ ಕೈ ನೋವು, ತಲೆ ನೋವು, ರಕ್ತಸ್ರಾವ, ಜಾಂಡೀಸ್, ಉಸಿರಾಟದ ತೊಂದರೆ ಈ ರೋಗದ ಲಕ್ಷಣಗಳು.