RCB ಹುಡುಗರೇ ಟ್ರೋಫಿ ಗೆದ್ದುಕೊಂಡು ತವರಿಗೆ ಬನ್ನಿ: ಡಿಸಿಎಂ ಶುಭ ಹಾರೈಕೆ

Date:

RCB ಹುಡುಗರೇ ಟ್ರೋಫಿ ಗೆದ್ದುಕೊಂಡು ತವರಿಗೆ ಬನ್ನಿ: ಡಿಸಿಎಂ ಶುಭ ಹಾರೈಕೆ

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ನ ಫೈನಲ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದು ನಡೆಯಲಿರುವ ಐಪಿಎಲ್ 2025ರ ಅಂತಿಮ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ.
ಆರ್ಸಿಬಿ ಹುಡುಗರೇ ಟ್ರೋಫಿ ಗೆದ್ದುಕೊಂಡು ತವರಿಗೆ ಬನ್ನಿ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ. ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಆರ್ಸಿಬಿ ತಂಡದ ಜೆರ್ಸಿ ಧರಿಸಿ ಮಾತನಾಡಿದ್ದು, ಇಂತಹ ಅದ್ಭುತ ದಿನಕ್ಕಾಗಿ ಕಳೆದ 18 ವರ್ಷಗಳಿಂದ ಕಾತುರದಿಂದ ಕಾಯುತ್ತಿದ್ದೇವೆ.
ಟ್ರೋಫಿಗಾಗಿ ಸಾಕಷ್ಟು ಶ್ರಮ ಪಟ್ಟು ಆರ್ಸಿಬಿ ಕೊನೆಗೆ ಐಪಿಎಲ್ನಲ್ಲಿ ಫೈನಲ್ ತಲುಪಿದೆ. ಇಂದು ಪಂಜಾಬ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಖಾಡಕ್ಕೆ ಇಳಿಯುತ್ತಿದೆ. ಇಡೀ ರಾಜ್ಯವೆಲ್ಲಾ ಟ್ರೋಫಿ ಗೆದ್ದು ಬರಲಿ ಎಂದು ಆರ್ಸಿಬಿ ತಂಡದ ಹಿಂದೆ ನಿಂತಿದೆ. ಆ ಅದ್ಭುತ ಕ್ಷಣವನ್ನು ಸಾಧಿಸಿ ತೋರಿಸಿ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ಸಿದ್ದರಾಮಯ್ಯ ಸರ್ಕಾರ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ: ಬಿ.ವೈ. ವಿಜಯೇಂದ್ರ

ಸಿದ್ದರಾಮಯ್ಯ ಸರ್ಕಾರ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ: ಬಿ.ವೈ. ವಿಜಯೇಂದ್ರ ಬೆಂಗಳೂರು: ಮುಖ್ಯಮಂತ್ರಿ...

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ ಬೇಡ – ಡಿ.ಕೆ. ಶಿವಕುಮಾರ್

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ...

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ ಗಂಭೀರ

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ...

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...