ಶ್ರೀಮಂತನಿಗೆ ಭಿಕ್ಷೆ ಬೇಡಬೇಕಾದ ಪರಿಸ್ಥಿತಿ ಬಂದೊದಗಿದ್ದು ಏಕೆ ಗೊತ್ತಾ?

Date:

ಅವನು ಅಗರ್ಭ ಶ್ರೀಮಂತ…ಆದರೆ, ಆತನಿಗೆ‌ ಒದಗಿ ಬಂದಿದೆ ದೇವಸ್ಥಾನದ ಮುಂದೆ ಕುಳಿತು ಭಿಕ್ಷೆ ಬೇಡುವ ಸ್ಥಿತಿ..! ದೇವಸ್ಥಾನ, ಬಸ್ ನಿಲ್ದಾಣ ಮೊದಲಾದ ಸಾರ್ವಜನಿಕ ಸ್ಥಳಗಳಲ್ಲಿ ಭಿಕ್ಷುಕರು ಭಿಕ್ಷಾಟನೆ ಮಾಡೋದು ಸಾಮಾನ್ಯ. ಆದರೆ, ಇಲ್ಲಿ ಶ್ರೀಮಂತ ವ್ಯಕ್ತಿ ಭಿಕ್ಷಾಟನೆ ಮಾಡುವ ಸ್ಥಿತಿ ನಿರ್ಮಾಣವಾಗಿದೆ…! ಇದು ರಷ್ಯಾದ ಶ್ರೀಮಂತ ಎ .ಇವಾಂಗೆಲಿನ್ (24) ಸ್ಥಿತಿ.


ವಿಶ್ವಪರ್ಯಟನೆ ಹೊರಟಿರುವ ಇವರು ಸೆಪ್ಟೆಂಬರ್ 24 ರಂದು ಭಾರತಕ್ಕೆ ಬಂದಿದ್ದಾರೆ. ನಿನ್ನೆ( ಮಂಗಳವಾರ) ಬೆಳಗ್ಗೆ ಚೆನ್ನೈನಿಂದ ಕಾಂಚಿಪುರಂ ಗೆ ಬಂದಿದ್ರು..ಇವತ್ತು ಬೆಳಗ್ಗೆ ಶ್ರೀ‌‌ಕುಮಾರ ಕೊಟ್ಟಂ ದೇವಸ್ಥಾನದ ಬಳಿ ಎಟಿಎಂ ನಿಂದ ಹಣ ಡ್ರಾ ಮಾಡಿಕೊಳ್ಳಲು ಹೋದಾಗ ಕಾರ್ಡ್ ಅಲ್ಲಿಯೇ ಸಿಕ್ಕಾಕಿಕೊಂಡಿದೆ. ಎಷ್ಟೇ ಪ್ರಯತ್ನಿಸಿದರೂ ಅದನ್ನು ಹೊರತೆಗೆಯಲು ಸಾಧ್ಯವಾಗಲಿಲ್ಲ. ಚೆನ್ನೈ ಗೆ ವಾಪಾಸ್ಸಾಗಲು ಬಿಡಿಗಾಸು ಇಲ್ಲದೇ ಇವಾಂಗೆಲಿನ್ ದೇವಾಲಯದ ಬಳಿ ಭಿಕ್ಷಾಟನೆ ಮಾಡುತ್ತಾರೆ. ಶಿವಕಾಂಚಿ ಪೊಲೀಸರು ಬಂದು ವಿಚಾರಿಸಲಾಗಿ ಇವಾಂಗೆಲಿನ್ ಬಳಿ ಎಲ್ಲಾ ದಾಖಲೆಗಳು ಇದ್ದವು ಆದರೆ, ಹಣ ಮಾತ್ರ ಇರಲಿಲ್ಲ..!
ಹೀಗೆ ಶ್ರೀಮಂತ ವ್ಯಕ್ತಿಗೂ ಭಿಕ್ಷೆ ಬೇಡೋ ಪರಿಸ್ಥಿತಿ ಬಂದಿದ್ದು, ಯಾರ ಟೈಮು ಹೆಂಗಿರುತ್ತೋ ಯಾವನಿಗೆ ಗೊತ್ತು…!?

Share post:

Subscribe

spot_imgspot_img

Popular

More like this
Related

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ ನವದೆಹಲಿ:...

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ ಬೆಂಗಳೂರು:...

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ!

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ! ಗರ್ಭಾವಸ್ಥೆಯಲ್ಲಿ ಮಹಿಳೆ ಅನುಭವಿಸುವ...

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ ನವದೆಹಲಿ:...